ಹುಬ್ಬಳ್ಳಿ: 2022ರ ಏಪ್ರಿಲ್ನಲ್ಲಿ ನಡೆದ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಸ್ ಪಡೆದುರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಮನವಿ ಸಲ್ಲಿಸಲು ಮುಂದಾದರೆ ಅದನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸದೇ ದುರಹಂಕಾರ ತೋರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು(ಅಕ್ಟೋಬರ್.13) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಲು ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಹೋದರೆ ಮುಖ್ಯಮಂತ್ರಿ ಭದ್ರತೆ ಎಂಬ ನೆಪವೊಡ್ಡಿ ಅವರನ್ನು ತಡೆಯುತ್ತಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಗೆ ಆ ರಾಜ್ಯದ ವಿರೋಧ ಪಕ್ಷದ ಶಾಸಕರು ಮನವಿ ಸಲ್ಲಿಸುವುದೇ ತಪ್ಪಾ? ಎಂದು ಪ್ರಶ್ನಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಲೇಬೇಕು. ಇಲ್ಲವಾದರೆ, ಸಿಎಂ ಒಬ್ಬರೂ ಮತಾಂಧ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ರುಜುವಾತು ಆಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಅವರು ಮನವಿಯನ್ನು ಸ್ವೀಕಾರಿಸಲೇಬೇಕು. ಇಲ್ಲವಾದರೆ ಸಿಎಂ ವಿರುದ್ಧ ತೀವ್ರವಾಗಿ ಹೋರಾಟ ನಡೆಸಲಾಗುತ್ತದೆ. ಒಂದು ವೇಳೆ ಹೋರಾಟದ ಸಂದರ್ಭದಲ್ಲಿ ಶಾಸಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ್ದರೂ ಸರಿಯೇ ನಾವು ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮನವಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿಯೇ ತಿರುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…