Categories: Uncategorized

ಹುಬ್ಬಳ್ಳಿ ಗಲಭೆ ಪ್ರಕರಣ: ಕೇಸ್‌ ವಾಪಸ್‌ ಪಡೆದ ಸಿಎಂ ಭಯೋತ್ಪಾದಕ ಬೆಂಬಲಿಗ

ಹುಬ್ಬಳ್ಳಿ:  2022ರ ಏಪ್ರಿಲ್‌ನಲ್ಲಿ ನಡೆದ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ವಾಪಸ್‌ ಪಡೆದುರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಮನವಿ ಸಲ್ಲಿಸಲು ಮುಂದಾದರೆ ಅದನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸದೇ ದುರಹಂಕಾರ ತೋರಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ.

ನಗರದಲ್ಲಿ ಇಂದು(ಅಕ್ಟೋಬರ್‌.13) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮನವಿ ಪತ್ರ ಸಲ್ಲಿಸಲು ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರು ಹೋದರೆ ಮುಖ್ಯಮಂತ್ರಿ ಭದ್ರತೆ ಎಂಬ ನೆಪವೊಡ್ಡಿ ಅವರನ್ನು ತಡೆಯುತ್ತಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಗೆ ಆ ರಾಜ್ಯದ ವಿರೋಧ ಪಕ್ಷದ ಶಾಸಕರು ಮನವಿ ಸಲ್ಲಿಸುವುದೇ ತಪ್ಪಾ? ಎಂದು ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಶಾಸಕರು ಹಾಗೂ ಕಾರ್ಯಕರ್ತರ ಮನವಿಯನ್ನು ಸ್ವೀಕರಿಸಲೇಬೇಕು. ಇಲ್ಲವಾದರೆ, ಸಿಎಂ ಒಬ್ಬರೂ ಮತಾಂಧ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ರುಜುವಾತು ಆಗುತ್ತದೆ. ಹೀಗಾಗಿ ಸಿದ್ದರಾಮಯ್ಯ ಅವರು ಮನವಿಯನ್ನು ಸ್ವೀಕಾರಿಸಲೇಬೇಕು. ಇಲ್ಲವಾದರೆ ಸಿಎಂ ವಿರುದ್ಧ ತೀವ್ರವಾಗಿ ಹೋರಾಟ ನಡೆಸಲಾಗುತ್ತದೆ. ಒಂದು ವೇಳೆ ಹೋರಾಟದ ಸಂದರ್ಭದಲ್ಲಿ ಶಾಸಕರು ಮತ್ತು ಕಾರ್ಯಕರ್ತರನ್ನು ಬಂಧಿಸಿ ಜೈಲಿಗಟ್ಟಿದ್ದರೂ ಸರಿಯೇ ನಾವು ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮನವಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿಯೇ ತಿರುತ್ತೇವೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago