Categories: Uncategorized

ಮಡಿಕೇರಿ| ಮಾರ್ಚ್.21ರಿಂದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್

ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಡೆಯಲಿದೆ.

ಒಟ್ಟು ಹತ್ತು ಮಾಲೀಕತ್ವದ ಹತ್ತು ತಂಡಗಳು ಪಾಲ್ಗೊಳ್ಳಲಿದ್ದು ಟೀಮ್ ಶೀಲ್ಡ್ ಮೇಕೇರಿ, ಟೀಮ್ ವಿರಾಟ್ಸ್ ಮಡಿಕೇರಿ, ಟೀಮ್ ಲೂಸರ್ಸ್ ಕಡಗದಾಳು, ಟ್ಯಾಂಗೋ ಬಾಯ್ಸ್ ಕಾಂತೂರು, ಟೀಮ್ ರೈಡರ್ಸ್ ಮರಗೋಡು, ಪ್ರವೀತ್ ಕ್ರಿಕೆಟರ್ಸ್ ಮರಗೋಡು, ಟೀಮ್ ಎಂ ಸ್ ಡಿ ಅರೆಕಾಡು, ಟೀಮ್ ಕಾರ್ಣಿಕ ಕೊಡಗು, ಕಿಂಗ್ಸ್ ಎಲೆವೆನ್ ಕಡಗದಾಳು, ಶ್ರೀ ಕುಶಾನಿ ಕ್ರಿಕೆಟರ್ಸ್ ಹುಲಿತಾಳ, ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿವೆ.

ಪಂದ್ಯ ಕೂಟದ ವಿನ್ನರ್ಸ್ ತಂಡಕ್ಕೆ 1ಲಕ್ಷ ನಗದು ಹಾಗೂ ಆಕರ್ಷಕ ಟ್ರೊಫಿ, ರನ್ನರ್ಸ್ ತಂಡಕ್ಕೆ 50,000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೆಯೇ ತೃತೀಯ ಬಹುಮಾನವಾಗಿ 10,000 ನಗದು ಹಾಗೂ ಆಕರ್ಷಕ ಟ್ರೊಫಿ, ಚತುರ್ಥ ಬಹುಮಾನವಾಗಿ 5000 ನಗದು ಹಾಗೂ ಆಕರ್ಷಕ ಟ್ರೊಫಿ ಹಾಗೂ ಕ್ರೀಡಾ ಪಟುಗಳಿಗೆ ವೈಯಕ್ತಿಕ ಬಹುಮಾನಗಳು ಕೂಡ ಸಿಗಲಿವೆ.

ಮರಗೋಡು, ಅರೆಕಾಡು, ಹೊಸ್ಕೇರಿ , ಕಡಗದಾಳು, ಕತ್ತಲೆಕಾಡು, ಹಾಕತ್ತೂರು, ಕಾಂಡನಕೊಲ್ಲಿ, ನೀರುಕೊಲ್ಲಿ, ಕಾಂತೂರು ಮೂರ್ನಾಡು ಮೆಕೇರಿ ವ್ಯಾಪ್ತಿಗೆ ಒಳಪಡುವ ಆಟಗಾರರಿಗೆ ಅವಕಾಶ ಇದ್ದು 3 ದಿನಗಳ ಕಾಲ ಪಂದ್ಯ ನಡೆಯಲಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

10 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

10 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

10 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

10 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

10 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago