Categories: Uncategorized

ನನ್ನನ್ನು ಸಂಪುಟದಿಂದ ಕಿತ್ತೊಗೆಯುವುದು ಅಸಾಧ್ಯ: ಜಮೀರ್‌ ಅಹ್ಮದ್

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಕ್ಫ್‌ ಆಸ್ತಿ ಸಂಬಂಧ ಸಚಿವ ಜಮೀರ್‌ ಅಹಮದ್‌ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡಿದ್ದರ ಕುರಿತು ಜಮೀರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಜಮೀರ್‌ ಅಹಮದ್‌ ಅವರು ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿದ್ದು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಜಮೀರ್‌ ಅಹ್ಮದ್‌ ತಮ್ಮನ್ನು ಸಂಪುಟದಿಂದ ಕಿತ್ತೊಗೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್‌ ಅಹಮದ್‌ ಅವರು ಪ್ರಹ್ಲಾದ್‌ ಜೋಶಿ ಅವರಿಗೆ ರಾಜ್ಯದ ಹಿಂದೂ- ಮುಸ್ಲಿಂ, ಮತೀಯವಾದ ಬಗ್ಗೆ ಮಾತನಾಡುವುದು ಬಿಟ್ಟು ಬೇರೆ ಗೊತ್ತಿಲ್ಲ. ಸಂಪುಟದಿಂದ ನನ್ನನ್ನು ತೆಗೆಯಲು ಸಾಧ್ಯವಿಲ್ಲ ಎಂದು ತಿರಗೇಟು ನೀಡಿದರು.

ಭಾರತ ಒಂದು ಜಾತ್ಯಾತೀತ ದೇಶ, ನಾವೆಲ್ಲರೂ ಭಾರತೀಯರು. ಪ್ರಹ್ಲಾದ್‌ ಜೋಶಿಯವರು ಜಾತಿ ರಾಜಕಾರಣ ಮಾಡಬಾರದು, ʼಮುಸ್ಲಿಂರು ಬಿಜೆಪಿ ವಿರುದ್ಧ ಮತ ಹಾಕುವ ಕಾರಣ ಸಮಯ ಸಿಕ್ಕಾಗಲೆಲ್ಲ ಈ ರೀತಿ ಮಾತನಾಡುತ್ತಾ ರಾಜ್ಯದ ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಾರೆʼಎಂದರು.

ರಾಜ್ಯದಲ್ಲಿ ಉಪಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಕ್ಫ್‌ ಆಸ್ತಿ ವಿಷಯ ಮುನ್ನಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ವಕ್ಫ್‌ ಬೋರ್ಡ್ ನಲ್ಲಿ ೨೩ ಸಾವಿರ ಎಕರೆ ಜಾಗ ಇದ್ದು. ೮೪ ಸಾವಿರ ಎಕರೆ ಒತ್ತುವರಿ ಆಗಿದೆ. ವಕ್ಪ್‌ ಆಸ್ತಿಯನ್ನು ಉಳಿಸಿಕೊಳ್ಳುವ ಉದ್ಧೇಶದಿಂದ ಅದರ ತೆರವಿಗೆ ವಕ್ಫ್‌ ಆದಾಲತ್‌ ನಡೆಸುತ್ತಿದ್ದೇವೆ, ಸರ್ಕಾರದ ಒಂದು ಇಂಚು ಜಾಗವನ್ನು ಪಡೆದಿಲ್ಲ ಎಂದು ಹೇಳಿದರು.

ವಿಜಯಪುರದಲ್ಲಿ ಈ ಆಸ್ತಿ ವಿಷಯವಾಗಿ ಬಿಜೆಪಿಯವರು ರೈತರನ್ನು ಎತ್ತಿಕಟ್ಟುತ್ತಿದ್ದಾರೆ. ವಕ್ಫ್‌ ಆಸ್ತಿ ಸಂಬಂಧ ಸೂಕ್ತವಾದ ಎಲ್ಲಾ ದಾಖಲೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ ಎಂದರು.

andolana

Recent Posts

ಮೈಸೂರು ಕರಗ ಮಹೋತ್ಸವ: ನಗರದಲ್ಲಿ ಅದ್ಧೂರಿ ಮೆರವಣಿಗೆ

ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…

4 hours ago

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

8 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

8 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

8 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

8 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

8 hours ago