Categories: Uncategorized

ನನ್ನನ್ನು ಸಂಪುಟದಿಂದ ಕಿತ್ತೊಗೆಯುವುದು ಅಸಾಧ್ಯ: ಜಮೀರ್‌ ಅಹ್ಮದ್

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಕ್ಫ್‌ ಆಸ್ತಿ ಸಂಬಂಧ ಸಚಿವ ಜಮೀರ್‌ ಅಹಮದ್‌ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಹೇಳಿಕೆ ನೀಡಿದ್ದರ ಕುರಿತು ಜಮೀರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಜಮೀರ್‌ ಅಹಮದ್‌ ಅವರು ರಾಜ್ಯದಲ್ಲಿ ಕೋಮು ದ್ವೇಷ ಹರಡುತ್ತಿದ್ದು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಪ್ರಹ್ಲಾದ್‌ ಜೋಶಿ ಹೇಳಿದ್ದರು. ಇದಕ್ಕೆ ತಿರುಗೇಟು ನೀಡಿರುವ ಜಮೀರ್‌ ಅಹ್ಮದ್‌ ತಮ್ಮನ್ನು ಸಂಪುಟದಿಂದ ಕಿತ್ತೊಗೆಯುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಪ್ರತಿಕ್ರಿಯಿಸಿದ ಸಚಿವ ಜಮೀರ್‌ ಅಹಮದ್‌ ಅವರು ಪ್ರಹ್ಲಾದ್‌ ಜೋಶಿ ಅವರಿಗೆ ರಾಜ್ಯದ ಹಿಂದೂ- ಮುಸ್ಲಿಂ, ಮತೀಯವಾದ ಬಗ್ಗೆ ಮಾತನಾಡುವುದು ಬಿಟ್ಟು ಬೇರೆ ಗೊತ್ತಿಲ್ಲ. ಸಂಪುಟದಿಂದ ನನ್ನನ್ನು ತೆಗೆಯಲು ಸಾಧ್ಯವಿಲ್ಲ ಎಂದು ತಿರಗೇಟು ನೀಡಿದರು.

ಭಾರತ ಒಂದು ಜಾತ್ಯಾತೀತ ದೇಶ, ನಾವೆಲ್ಲರೂ ಭಾರತೀಯರು. ಪ್ರಹ್ಲಾದ್‌ ಜೋಶಿಯವರು ಜಾತಿ ರಾಜಕಾರಣ ಮಾಡಬಾರದು, ʼಮುಸ್ಲಿಂರು ಬಿಜೆಪಿ ವಿರುದ್ಧ ಮತ ಹಾಕುವ ಕಾರಣ ಸಮಯ ಸಿಕ್ಕಾಗಲೆಲ್ಲ ಈ ರೀತಿ ಮಾತನಾಡುತ್ತಾ ರಾಜ್ಯದ ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುತ್ತಾರೆʼಎಂದರು.

ರಾಜ್ಯದಲ್ಲಿ ಉಪಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ವಕ್ಫ್‌ ಆಸ್ತಿ ವಿಷಯ ಮುನ್ನಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

ವಕ್ಫ್‌ ಬೋರ್ಡ್ ನಲ್ಲಿ ೨೩ ಸಾವಿರ ಎಕರೆ ಜಾಗ ಇದ್ದು. ೮೪ ಸಾವಿರ ಎಕರೆ ಒತ್ತುವರಿ ಆಗಿದೆ. ವಕ್ಪ್‌ ಆಸ್ತಿಯನ್ನು ಉಳಿಸಿಕೊಳ್ಳುವ ಉದ್ಧೇಶದಿಂದ ಅದರ ತೆರವಿಗೆ ವಕ್ಫ್‌ ಆದಾಲತ್‌ ನಡೆಸುತ್ತಿದ್ದೇವೆ, ಸರ್ಕಾರದ ಒಂದು ಇಂಚು ಜಾಗವನ್ನು ಪಡೆದಿಲ್ಲ ಎಂದು ಹೇಳಿದರು.

ವಿಜಯಪುರದಲ್ಲಿ ಈ ಆಸ್ತಿ ವಿಷಯವಾಗಿ ಬಿಜೆಪಿಯವರು ರೈತರನ್ನು ಎತ್ತಿಕಟ್ಟುತ್ತಿದ್ದಾರೆ. ವಕ್ಫ್‌ ಆಸ್ತಿ ಸಂಬಂಧ ಸೂಕ್ತವಾದ ಎಲ್ಲಾ ದಾಖಲೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಜಿಲ್ಲಾಧಿಕಾರಿಗೆ ತಿಳಿಸಿದ್ದಾರೆ ಎಂದರು.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago