Categories: Uncategorized

ಮದ್ಯ ನೀಡದಿದ್ದರೆ ವಿಮಾನ ಸ್ಪೋಟಿಸುತ್ತೇನೆ: ರಷ್ಯಾ ಹಾಕಿ ಆಟಗಾರನ ಕಿರಿಕ್

ನವದೆಹಲಿ : ಮದ್ಯ ಸೇವಿಸಲು ಅವಕಾಶ ನೀಡದಿದ್ದರೆ ವಿಮಾನ ಸ್ಪೋಟಿಸುವುದಾಗಿ ರಷ್ಯಾ ಹಾಕಿ ಆಟಗಾರ ಬೆದರಿಕೆ ಹಾಕಿದ್ದಾನೆ ಎಂದು ನ್ಯೂಸ್ ವೀಕ್ ವರದಿ ಮಾಡಿದೆ. ಯೆಕಟೆರಿನ್‍ಬರ್ಗ್‍ನಲ್ಲಿರುವ ರಷ್ಯಾದ ಹಾಕಿ ಲೀಗ್ ತಂಡದ ಮೊನೆಟ್ಕಾದಿಂದ ಆಂಡ್ರೇ ಸಿಡಿಯಾಕಿನ್ ಅವರು ವಿಮಾನದಲ್ಲಿ ವೋಡ್ಕಾಗೆ ಬೇಡಿಕೆಯಿಟ್ಟರು, ಆದಾಗ್ಯೂ, ಸಿಬ್ಬಂದಿ ಅವರಿಗೆ ಆದ್ಯತೆಯ ಪಾನೀಯವನ್ನು ನೀಡಲು ನಿರಾಕರಿಸಿದ ನಂತರ ಅವರು ಈ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಆತ ಮದ್ಯಕ್ಕಾಗಿ ಬೇಡಿಕೆಯನ್ನು ಮುಂದುವರೆಸಿದರು ಕ್ರ್ಯೂ ಸಿಬ್ಬಂದಿ ಮದ್ಯ ನೀಡಲು ನಿರಾರಕರಿಸಿದಾಗ ನನ್ನ ಬಳಿ ಸ್ಪೋಟಕ ಸಾಧನವಿದೆ ಮದ್ಯ ನೀಡದಿದ್ದರೆ ವಿಮಾನ ಉಡಾಯಿಸುವುದಾಗಿ ಬೆದರಿಕೆ ಹಾಕಿದ ಎನ್ನಲಾಗಿದೆ. ತಕ್ಷಣ ಸಿಬ್ಬಂದಿಗಳು ವಿಮಾನದ ಉಳಿದ ಭಾಗಗಳಲ್ಲಿ ಬಾಂಬ್ ಅಥವಾ ಶಸ್ತ್ರಾಸ್ತ್ರಗಳನ್ನು ಹುಡುಕಲು ಮುಂದಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ವರದಿಯಾಗಿದೆ.

 

ಇದಲ್ಲದೆ, ಮಾಸ್ಕೋಗೆ ಆಗಮಿಸಿದ ನಂತರ ಶೆರೆಮೆಟಿವೊ ವಿಮಾನ ನಿಲ್ದಾಣದಿಂದ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿಯಿಂದ ವಿಮಾನವನ್ನು ಪರೀಕ್ಷಿಸಲಾಯಿತು ಆದರೂ ಸಿಡಿಯಾಕಿನ್ ಅವರನ್ನು ಬಂಧಿಸಲಾಗಿಲ್ಲ ಮತ್ತು ಅವರು ಪ್ರಯಾಣ ಮುಂದುವರೆಸಲು ಅವಕಾಶ ನಿರಾಕರಿಸಲಾಯಿತು ಎಂದು ತಿಳಿದುಬಂದಿದೆ.

andolanait

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

56 mins ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

2 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

2 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

2 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

3 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

3 hours ago