Categories: Uncategorized

ಇಡಿ ಕೈಗೆ ಪ್ರಮುಖ ಸಾಕ್ಷ್ಯ!

ಎರಡನೇ ದಿನವೂ ಅಧಿಕಾರಿಗಳಿಂದ ಮುಡಾ ದಾಖಲೆಗಳ ಪರಿಶೀಲನೆ

ಮೈಸೂರು: ನಿವೇಶನಗಳ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಽಸಿದಂತೆ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ೨ನೇ ದಿನವಾದ ಶನಿವಾರವೂ ದಾಳಿ ಮುಂದುವರಿಸಿದ್ದು, ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ದೊರೆತಿವೆ.

ಇಡಿ ಅಧಿಕಾರಿಗಳ ಮೊದಲ ದಿನದ ಡ್ರಿಲ್‌ಗೆ ಬೆಚ್ಚಿಬಿದ್ದ ಮುಡಾ ಅಧಿಕಾರಿಗಳು, ವೈಟ್ನರ್  ಹಚ್ಚದ ದಾಖಲೆಗಳನ್ನು ಶನಿವಾರ ತಂದೊಪ್ಪಿಸಿ ದ್ದಾರೆ. ಇದರಿಂದಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗುವ
ಸಾಧ್ಯತೆ ಇದೆ.

ಶುಕ್ರವಾರ ಬೆಳಿಗ್ಗೆ ೧೧ ಗಂಟೆಯಿಂದ ಸತತ ೧೨ ಗಂಟೆಗಳ ಕಾಲ ಸಾಕಷ್ಟು ದಾಖಲೆಗಳನ್ನು ಮುಂದಿಟ್ಟುಕೊಂಡು ವಿಚಾರಣೆ ನಡೆಸಿದ್ದ ಇಡಿ ಅಧಿಕಾರಿಗಳು, ರಾತ್ರಿ ಕಚೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಶನಿವಾರ ಬೆಳಿಗ್ಗೆ ಮತ್ತೆ ಸಿಆರ್ ಪಿಎಫ್- ಯೋಧರ ಭದ್ರತೆಯೊಂದಿಗೆ ಆಯುಕ್ತರ ಕೊಠಡಿಯಲ್ಲಿ ೧೨ ಅಧಿಕಾರಿಗಳ ತಂಡ ಮತ್ತೆ ವಿಚಾರಣೆ ಮುಂದುವರಿಸಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಗುರಿಯಾಗಿಸಿಕೊಂಡು ವಿಚಾರಣೆ ನಡೆಸಿದ ಹಿರಿಯ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿಗೆ ಸಂಬಂಧಿಸಿದ ೫೦:೫೦ ಅನುಪಾತದಡಿ ಮಂಜೂರಾಗಿರುವ ೧೪ ನಿವೇಶನಗಳ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿದರು. ಕೆಸರೆ ಗ್ರಾಮದ ಸರ್ವೆ ನಂಬರ್ ೪೬೪ರ ಮೇಲೆ ಹೆಚ್ಚು ಕೇಂದ್ರೀಕರಿಸಿದ್ದ ತನಿಖಾಧಿಕಾರಿಗಳು ತಹಸಿಲ್ದಾರ್, ವಲಯ ಆಯುಕ್ತರು, ಪ್ರಥಮ ದರ್ಜೆ, ದ್ವಿತೀಯ ದರ್ಜೆ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿ ಮಾಹಿತಿ ಪಡೆದರು.

ಪ್ರತಿಯೊಬ್ಬರಿಗೂ ತಮ್ಮದೇ ಆದ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆಯುವ ಜತೆಗೆ ಒಬ್ಬರಿಗೊಬ್ಬರು ಮರು ಪ್ರಶ್ನೆಗಳನ್ನೂ ಹಾಕಿ ಸತ್ಯಾಂಶ ಹೊರ ತೆಗೆಯುವಲ್ಲಿ ಸ-ಲರಾಗಿದ್ದಾರೆ. ಕೇಂದ್ರೀಯ ಅರೆಸೇನಾಪಡೆ ಭದ್ರತೆಯಲ್ಲಿ ದಾಖಲೆಗಳನ್ನು ಆರು ಮಂದಿ ತಂಡ ಪರಿಶೀಲಿಸಿತು.

ಬೆಂಗಳೂರಿನಿಂದ ಕರೆಯಿಸಿದ್ದ ಇಬ್ಬರು ಎ-ಎಸ್‌ಎಲ್ ಅಧಿಕಾರಿಗಳ ಕೈಗೆ ಮೂಲ ದಾಖಲೆ ಒದಗಿಸಿ ವರದಿ ನೀಡುವಂತೆ ಕೇಳಲಾ
ಗಿದೆ. ಮನವಿ ಪತ್ರದ ೨ನೇ ಪುಟದಲ್ಲಿದ್ದ ಖಾಲಿ ಜಾಗಕ್ಕೆ ವೈಟ್ನರ್ ಹಚ್ಚಿದ್ದ ವಿಚಾರವೇ ಈಗ ಇಡಿಗೆ
ಸಿಕ್ಕಿದ ಪ್ರಮುಖ ಸಾಕ್ಷ್ಯವಾಗಿದೆ.

ಮೂಲ ದಾಖಲೆ ಪತ್ತೆ

ಮುಡಾ ಅಧಿಕಾರಿಗಳಿಗೆ ಸಿದ್ದರಾಮಯ್ಯ ಪತ್ನಿ ನೀಡಿದ್ದ ಮನವಿ ಪತ್ರಕ್ಕೆ ವೈಟ್ನರ್ ಹಚ್ಚಿರುವುದು ಪತ್ತೆಯಾಗಿದೆ. ಮನವಿ ಪತ್ರದ ೨ನೇ ಪುಟದಲ್ಲಿದ್ದ ಖಾಲಿ ಜಾಗಕ್ಕೆ ವೈಟ್ನರ್ ಹಚ್ಚಲಾಗಿತ್ತು. ಆದರೆ, ಇದರ ಮಧ್ಯೆಯೇ ವೈಟ್ನರ್ ಹಚ್ಚಿರುವ ಪತ್ರ ಕೂಡ
ಇಡಿ ಅಧಿಕಾರಿಗಳಿಗೆ ಸಿಕ್ಕಿದೆ. ವೈಟ್ನರ್ ಹಚ್ಚಿದ ದಾಖಲೆಯೇ ಸಿದ್ದರಾಮಯ್ಯಗೆ ಸಂಕಷ್ಟ ತರಲಿದೆಯೇ ಎಂಬ ಪ್ರಶ್ನೆ ಇದೀಗ ಮೂಡಿದೆ.

ಸಿಎಂ ಬಿಡುಗಡೆ ಮಾಡಿರುವ ದಾಖಲೆ ಹಾಗೂ ಆರ್‌ಟಿಐನಲ್ಲಿ ನೀಡಿದ್ದ ದಾಖಲೆ ಬೇರೆ ಬೇರೆ ಇದೆ. ವೈಟ್ನರ್‌ನಲ್ಲೂ ವ್ಯತ್ಯಾಸ ಕಂಡು ಬಂದಿದೆ. ಇದಿಷ್ಟೇ ಅಲ್ಲ,ಎರಡೂ ದಾಖಲೆಗಳಲ್ಲಿ ಸಿಎಂ ಪತ್ನಿಯ ಸಹಿಯಲ್ಲಿಯೂ ವ್ಯತ್ಯಾಸ ಕಂಡು ಬಂದಿದೆ ಎನ್ನಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

4 hours ago

ಬಾಲ್ಯವನ್ನು ನೆನಪಿಸಿದ ಗುರು-ಶಿಷ್ಯರ ಸ್ನೇಹ ಸಮ್ಮಿಲನ

ಎಸ್.ಎ.ಹುಸೇನ್ ಡಿ.ಚೆನ್ನಮ್ಮ ಶಾಲೆಯ ಹಳೇ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ಕಣ್ಣಾಲಿಗಳನ್ನು ಒದ್ದೆಯಾಗಿಸಿದ ಗುರು-ಶಿಷ್ಯರ ಬಾಂಧವ್ಯ ಮಡಿಕೇರಿ: ಕಾಲ ಚಕ್ರ ಉರುಳುತ್ತಾ ಸಾಗುತ್ತದೆ, ತಲೆಗೂದಲು…

4 hours ago

ಹೆದ್ದಾರಿಯಲ್ಲಿ ಮನಸ್ಸಿಗೆ ಮುದ ನೀಡುತ್ತಿರುವ ಕೆಂಬಣ್ಣದ ಹೂಗಳ ಚಿತ್ತಾರ!

ಭೇರ್ಯ ಮಹೇಶ್ ಕೆ.ಆರ್.ನಗರದಿಂದ ಭೇರ್ಯ ಗ್ರಾಮದವರೆಗೆ ಅಲ್ಲಲ್ಲಿ ಮೇ ಫ್ಲವರ್ ಮರಗಳ ಆಕರ್ಷಣೆ  ಕೆ.ಆರ್.ನಗರ: ಬೇಸಿಗೆಯ ನಡುವೆ ಆಗೊಮ್ಮೆ ಈಗೊಮ್ಮೆ…

4 hours ago

ಪಾರಂಪರಿಕ ಕಟ್ಟಡ ತತ್ತರ; ನಿರ್ವಹಣೆಗಿಲ್ಲ ಸ್ಪಷ್ಟ ಉತ್ತರ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೆಗ್ಗುರುತುಗಳಲ್ಲಿ ಪಾರಂಪರಿಕ ಕಟ್ಟಡಗಳೂ ಪ್ರಮುಖವಾದವು. ಪ್ರವಾಸಿಗರಿಗೂ ಇವುಗಳ ಸೆಳೆತ ಇದ್ದೇ ಇದೆ. ಇಂತಹ ಕಟ್ಟಡಗಳ…

4 hours ago

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

14 hours ago