Uncategorized

ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆ

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್.‌11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್‌ ಜೊತೆ ಪೊಲೀಸರು ತೀವ್ರ ಶೋಧ ಮತ್ತು ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಗಂಡೋ ಪ್ರದೇಶದ ಬಜಾದ್‌ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದೆ.

ಜೂನ್.‌11ರಂದು ಚತ್ತರಗಲ್ಲದ ಚೆಕ್‌ಪೋಸ್ಟ್‌ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್‌ ಅಧಿಕಾರಿ ಗಾಯಗೊಂಡಿದ್ದರು. ಈ ಅವಳಿ ದಾಳಿಯ ನಂತರದಲ್ಲಿ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದವು. ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.

ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್‌ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.

ಈ ಮಧ್ಯೆ ರಜೌರಿ ಜಿಲ್ಲೆಯ ಚಿಂಗಸ್‌ ಪ್ರದೇಶದ ಪಿಂಡ್‌ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

43 mins ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

1 hour ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

15 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

15 hours ago