ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್.11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಜೊತೆ ಪೊಲೀಸರು ತೀವ್ರ ಶೋಧ ಮತ್ತು ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದೆ.
ಜೂನ್.11ರಂದು ಚತ್ತರಗಲ್ಲದ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಈ ಅವಳಿ ದಾಳಿಯ ನಂತರದಲ್ಲಿ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದವು. ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.
ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.
ಈ ಮಧ್ಯೆ ರಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…