ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಖಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್.11 ಮತ್ತು 12 ರಂದು ಗುಡ್ಡಗಾಡು ಜಿಲ್ಲೆಯಲ್ಲಿ ನಡೆದ ಅವಳಿ ಭಯೋತ್ಪಾದಕ ದಾಳಿಯ ನಂತರ ಭಾರತೀಯ ಸೇನೆ ಮತ್ತು ಕೇಂದ್ರ ಮೀಸಲು ಪೊಲೀಸ್ ಜೊತೆ ಪೊಲೀಸರು ತೀವ್ರ ಶೋಧ ಮತ್ತು ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಗಂಡೋ ಪ್ರದೇಶದ ಬಜಾದ್ ಗ್ರಾಮದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದೆ.
ಜೂನ್.11ರಂದು ಚತ್ತರಗಲ್ಲದ ಚೆಕ್ಪೋಸ್ಟ್ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ ಆರು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮರುದಿನ ಗಂಡೋ ಪ್ರದೇಶದ ಕೋಟಾದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬರು ಪೊಲೀಸ್ ಅಧಿಕಾರಿ ಗಾಯಗೊಂಡಿದ್ದರು. ಈ ಅವಳಿ ದಾಳಿಯ ನಂತರದಲ್ಲಿ ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದವು. ಗಡಿ ನುಸುಳಿದ ನಾಲ್ವರು ಪಾಕಿಸ್ತಾನಿ ಭಯೋತ್ಪಾದಕರ ತಲೆಗೆ ತಲಾ 5 ಲಕ್ಷ ರೂಪಾಯಿ ನಗದು ಬಹುಮಾನವನ್ನು ಘೋಷಿಸಿದರು.
ಇಂದು ಭದ್ರತಾ ಪಡೆಗಳ ಸಹಾಯದಿಂದ ಪೊಲೀಸರು ಸಿನೂ ಪಂಚಾಯತ್ ಗ್ರಾಮದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿದರು. ಆದರೆ ಮಣ್ಣಿನ ಮನೆಯಲ್ಲಿ ಅಡಗಿದ್ದ ಭಯೋತ್ಪಾದಕರು ಪೊಲೀಸರ ಮೇಲೆ ಭಾರೀ ಗುಂಡಿನ ದಾಳಿ ನಡೆಸಿದರು. ಪ್ರತೀಕಾರದ ಗುಂಡಿನ ದಾಳಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು ಎಂದು ಅಧಿಕಾರಿಯೋರ್ವರು ಹೇಳಿದ್ದಾರೆ.
ಈ ಮಧ್ಯೆ ರಜೌರಿ ಜಿಲ್ಲೆಯ ಚಿಂಗಸ್ ಪ್ರದೇಶದ ಪಿಂಡ್ ಎಂಬ ಹಳ್ಳಿಯಲ್ಲಿ ಚೀನಾ ನಿರ್ಮಿತ ಕೈ ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…