ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ತಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಸೇರಿದ ಸಾವಿರಾರು ಕಾರ್ಯಕರ್ತರು, ಕನ್ನಡ ನಾಡಿನಲ್ಲಿ ಕೇಂದ್ರ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ಇತರ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ಬರುವವರ ಸಂಖ್ಯೆ ಹೆಚ್ಚಾಗಿದೆ. ಖಾಸಗಿ ವಲಯದಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ತುಂಬಾ ಅನ್ಯಾಯವಾಗುತ್ತಿದೆ. ಆದ್ದರಿಂದ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.
ಬಳಿಕ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಪ್ರತಿಭಟನಾಕಾರನನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…
ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ…