Uncategorized

ಗಣೇಶೋತ್ಸವದ ನಿರ್ಬಂಧ ತೆರವುಗೊಳಿಸಿ : ಸರ್ಕಾರಕ್ಕೆ ಪ್ರತಿಪಕ್ಷಗಳ ಆಗ್ರಹ

ಬೆಂಗಳೂರು : ಗಣೇಶೋತ್ಸವಕ್ಕೆ ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಮುಗಿಬಿದ್ದ ಪ್ರಸಂಗ ವಿಧಾನಪರಿಷತ್‍ನಲ್ಲಿ ನಡೆಯಿತು.

ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿಯ ಸುನಿಲ್ ವಲ್ಯಾಪುರ್ ಅವರು ವಿಷಯ ಪ್ರಸ್ತಾಪಿಸಿ ಗಣೇಶ ಉತ್ಸವಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹಾಕಿದೆ. ಅನ್ಯಧರ್ಮಗಳ ಆಚರಣೆಗೆ ಇಲ್ಲದ ನಿರ್ಬಂಧ ನಮ್ಮ ಆಚರಣೆಗೆ ಏಕೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಎನ್.ರವಿಕುಮಾರ್, ಶಶಿಲ್ ನಮೋಶಿ, ಭಾರತಿ ಶೆಟ್ಟಿ ಮತ್ತಿತರ ಸದಸ್ಯರು, ಇದು ಕೇವಲ ಕಲಬುರಗಿಯಲ್ಲಿ ಮಾತ್ರ ಇಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ಕಿಡಿಕಾರಿದರು.

ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ನಮ್ಮ ಹಬ್ಬಗಳಿಗೆ ಆಚರಣೆ ಮಾಡಲು ಜಿಲ್ಲಾಧಿಕಾರಿಗಳು ಇಲ್ಲವೇ ಬೇರೊಬ್ಬರು ಏಕೆ ಅನುಮತಿ ಕೊಡಬೇಕು. ಅದರಲ್ಲೂ ಕಲಬುರಗಿಯಲ್ಲಿ ವಿಭಿನ್ನವಾದ ಆಡಳಿತವಿದೆ. ಒಂದು ರೀತಿ ರಿಪಬ್ಲಿಕ್ ಆಫ್ ಕಲಬುರಗಿ ಇದೆ ಎಂದು ಪರೋಕ್ಷವಾಗಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಹೇಳದೆ ವಾಗ್ದಾಳಿ ನಡೆಸಿದರು.

ಬ್ರಿಟಿಷರ ಕಾಲದಲ್ಲೂ ಇಂತಹ ಪರಿಸ್ಥಿತಿ ಇರಲಿಲ್ಲ. ಗಣೇಶ ಉತ್ಸವವನ್ನು ನಮ್ಮ ಹಿಂದೂಗಳು ಶ್ರದ್ಧಾಭಕ್ತಿಯಿಂದ ಆಚರಿಸುತ್ತೇವೆ. ಇದು ನಮ್ಮ ಒಗ್ಗಟ್ಟಿನ ಸಂಕೇತ. ಇದಕ್ಕೆ ಏಕೆ ನಿರ್ಬಂಧ? ಮೊದಲು ತೆಗೆದುಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈಗಾಗಲೇ ಸಭಾನಾಯಕರು ಇದಕ್ಕೆ ಉತ್ತರ ಕೊಟ್ಟಿದ್ದಾರೆ. ನಾನು ಚರ್ಚೆಗೆ ಅವಕಾಶ ಕೊಡುವುದಿಲ್ಲ ಎಂದು ಸಭಾಪತಿ ಹೊರಟ್ಟಿಯವರು ಹೇಳಿದರು.

ಗಲಾಟೆಯ ಮಧ್ಯೆಯೇ ಸಿ.ಟಿ.ರವಿ ಮಾತನಾಡಿ, ಯಾವುದೋ ಒಂದು ಧರ್ಮದ ತುಷ್ಟೀಕರಣಕ್ಕಾಗಿ ನಮ್ಮ ಹಿಂದೂ ಧರ್ಮದ ಹಬ್ಬಗಳಿಗೆ ನಿರ್ಬಂಧ ಹಾಕಲಾಗುತ್ತಿದೆ. ನಿಮಗೆ ಬೇರೆ ಧರ್ಮದ ಹಬ್ಬಗಳಿಗೆ ಇದೇ ನಿರ್ಬಂಧ ಹಾಕುವ ತಾಕತ್ತು ಇಲ್ಲವೇ? ಎಂದು ಪ್ರಶ್ನಿಸಿದರು.

ಆಗ ಮತ್ತೆ ಸದನದಲ್ಲಿ ಕೋಲಾಹಲ ಉಂಟಾಗಿ ಯಾರು, ಏನು ಹೇಳುತ್ತಿದ್ದಾರೆ ಎಂಬುದೇ ತಿಳಿಯಲಿಲ್ಲ. ನಾನು ಈಗಾಗಲೇ ರೂಲಿಂಗ್ ಕೊಟ್ಟಿದ್ದೇನೆ. ಇದರ ಬಗ್ಗೆ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಸಭಾಪತಿಗಳು ಪುನರುಚ್ಚರಿಸಿದರು. ಪ್ರತಿಪಕ್ಷದ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾಗಲೇ ವಿಧಾನಪರಿಷತ್ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು.

ಆಂದೋಲನ ಡೆಸ್ಕ್

Recent Posts

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

16 mins ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

44 mins ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

55 mins ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

1 hour ago

ಭಣಗುಡುತ್ತಿದ್ದ ರಾಮನಗುಡ್ಡ ಕೆರೆಗೆ ಜೀವಕಳೆ: 30 ವರ್ಷಗಳ ಬಳಿಕ ರೈತರ ಮೊಗದಲ್ಲಿ ಹರ್ಷ

ಮಹಾದೇಶ್‌ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎವ್ಗನ್ ಬಾವ್ಚಾರ್ ಎಂಬ ಕಣ್ಣಿಲ್ಲದ ಫೋಟೋಗ್ರಾಫರ್!

ಪಂಜು ಗಂಗೊಳ್ಳಿ  ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…

5 hours ago