Uncategorized

ಸಂಸತ್‌ ಅಧಿವೇಶನ: ಮೋದಿ ಅದಾನಿ ಏಕ್‌ ಹೈ ಎಂಬ ಜಾಕೆಟ್‌ ಧರಿಸಿ ವಿಪಕ್ಷಗಳ ಪ್ರತಿಭಟನೆ

ನವದೆಹಲಿ: ಉದ್ಯಮಿ ಗೌತಮ್‌ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ.

ಈ ಕುರಿತು ಇಂದು(ಡಿ.5) ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್‌ ಗಾಂಧಿ ಅವರು, ಮೋದಿ ಅದಾನಿ ಏಕ್‌ ಹೈ, ಅದಾನಿ ಸೇಫ್‌ ಹೈ ಎಂದು ಬರೆದಿರುವ ಜಾಕೆಟ್‌ ಧರಿಸಿ ನೂತನ ರೀತಿಯಲ್ಲಿ ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್‌ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈ ಸಂದರ್ಭದಲ್ಲಿ ರಾಹುಲ್‌ ಅವರು ಪ್ರತಿಕ್ರಿಯೆ ನೀಡಿ, ಅದಾನಿ ವಿರುದ್ಧ ಮೋದಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ತನಿಖೆಗೆ ಆದೇಶ ನೀಡಿದರೆ ಸ್ವತಃ ಮೋದಿ ಅವರೇ ತನಿಖೆ ಎದುರಿಸಬೇಕಾಗುತ್ತದೆ. ಮೋದಿ ಮತ್ತು ಅದಾನಿ ವಂಚನೆ ಪ್ರಕರಣದಲ್ಲಿ ಒಂದೇ ಆಗಿದ್ದಾರೆ. ಅವರಿಬ್ಬರು ಬೇರೆ ಬೇರೆ ಅಲ್ಲ, ಒಂದೇ ಆಗಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ವಿಪಕ್ಷ ಸಂಸದರಾದ ಪ್ರಿಯಾಂಕಾ ಗಾಂಧಿ ಅವರು ಸಾಥ್‌ ನೀಡಿದ್ದು, ಅದಾನಿ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿ, ಜಂಟಿ ಸಂಸದೀಯ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

4 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

4 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

9 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

9 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

9 hours ago