ನವದೆಹಲಿ: ಉದ್ಯಮಿ ಗೌತಮ್ ಅದಾನಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ಪ್ರತಿಭಟನೆ ಮುಂದುವರೆಸಿದ್ದಾರೆ.
ಈ ಕುರಿತು ಇಂದು(ಡಿ.5) ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಮೋದಿ ಅದಾನಿ ಏಕ್ ಹೈ, ಅದಾನಿ ಸೇಫ್ ಹೈ ಎಂದು ಬರೆದಿರುವ ಜಾಕೆಟ್ ಧರಿಸಿ ನೂತನ ರೀತಿಯಲ್ಲಿ ಪ್ರಧಾನಿ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಈ ಸಂದರ್ಭದಲ್ಲಿ ರಾಹುಲ್ ಅವರು ಪ್ರತಿಕ್ರಿಯೆ ನೀಡಿ, ಅದಾನಿ ವಿರುದ್ಧ ಮೋದಿ ತನಿಖೆಗೆ ಆದೇಶಿಸಲು ಸಾಧ್ಯವಿಲ್ಲ. ಒಂದು ವೇಳೆ ತನಿಖೆಗೆ ಆದೇಶ ನೀಡಿದರೆ ಸ್ವತಃ ಮೋದಿ ಅವರೇ ತನಿಖೆ ಎದುರಿಸಬೇಕಾಗುತ್ತದೆ. ಮೋದಿ ಮತ್ತು ಅದಾನಿ ವಂಚನೆ ಪ್ರಕರಣದಲ್ಲಿ ಒಂದೇ ಆಗಿದ್ದಾರೆ. ಅವರಿಬ್ಬರು ಬೇರೆ ಬೇರೆ ಅಲ್ಲ, ಒಂದೇ ಆಗಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ವಿಪಕ್ಷ ಸಂಸದರಾದ ಪ್ರಿಯಾಂಕಾ ಗಾಂಧಿ ಅವರು ಸಾಥ್ ನೀಡಿದ್ದು, ಅದಾನಿ ಪ್ರಕರಣದ ಬಗ್ಗೆ ತನಿಖೆಗೆ ಆಗ್ರಹಿಸಿ, ಜಂಟಿ ಸಂಸದೀಯ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…