Uncategorized

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ.

ಇದೀಗ ಲೋಕಾಯುಕ್ತ ಇಲಾಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಹೆಸರನ್ನು ಪ್ರಕಟಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ.

ಲೋಕಾಯುಕ್ತ ನಿಯಮ ಏನು?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ. ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ನಿಯಮದಂತೆ ಲೊಕಾಯುಕ್ತ ಇಲಾಖೆಯು ಆಸ್ತಿ ವಿವರಗಳನ್ನು ನೀಡದ ಶಾಸಕರು ಮತ್ತು ಎಂಎಲ್‌ಸಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿ ಇದೆ.

andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

2 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

2 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

2 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

2 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

3 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

3 hours ago