Uncategorized

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ.

ಇದೀಗ ಲೋಕಾಯುಕ್ತ ಇಲಾಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಹೆಸರನ್ನು ಪ್ರಕಟಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ.

ಲೋಕಾಯುಕ್ತ ನಿಯಮ ಏನು?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ. ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ನಿಯಮದಂತೆ ಲೊಕಾಯುಕ್ತ ಇಲಾಖೆಯು ಆಸ್ತಿ ವಿವರಗಳನ್ನು ನೀಡದ ಶಾಸಕರು ಮತ್ತು ಎಂಎಲ್‌ಸಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿ ಇದೆ.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

10 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago