Uncategorized

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ.

ಇದೀಗ ಲೋಕಾಯುಕ್ತ ಇಲಾಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಹೆಸರನ್ನು ಪ್ರಕಟಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ.

ಲೋಕಾಯುಕ್ತ ನಿಯಮ ಏನು?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ. ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ನಿಯಮದಂತೆ ಲೊಕಾಯುಕ್ತ ಇಲಾಖೆಯು ಆಸ್ತಿ ವಿವರಗಳನ್ನು ನೀಡದ ಶಾಸಕರು ಮತ್ತು ಎಂಎಲ್‌ಸಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿ ಇದೆ.

andolanait

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

1 hour ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago