Uncategorized

ಆಸ್ತಿ ವಿವರಗಳನ್ನು ಸಲ್ಲಿಸದ ಶಾಸಕರ ಪಟ್ಟಿ ಬಿಡುಗಡೆ ಮಾಡಿದ ಲೋಕಾಯುಕ್ತ ಇಲಾಖೆ

ಬೆಂಗಳೂರು: ಚುನಾವಣೆ ಮುಗಿದು ಮೂರು ತಿಂಗಳ ಒಳಗಾಗಿ ಚುನಾವಣೆಯಲ್ಲಿ ಆಯ್ಕೆಯಾದ ಜನಪ್ರತಿನಿಧಿಗಳು ತಮ್ಮ ಆಸ್ತಿ ವಿವರಗಳನ್ನು ಲೋಕಾಯುಕ್ತ ಇಲಾಖೆಗೆ  ಸಲ್ಲಿಸಬೇಕು ಎಂಬ ಕಾನೂನು ಇದೆ.  ಆದರೆ ಇನ್ನಾದರು ಕೆಲವು ರಾಜಕಾರಣಿಗಳು ಆಸ್ತಿ ವಿವರಗಳನ್ನು ಸಲ್ಲಿಸಿಲ್ಲ ಎಂಬುದು ತಿಳಿದು ಬಂದಿದೆ.

ಇದೀಗ ಲೋಕಾಯುಕ್ತ ಇಲಾಕೆ ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳ ಹೆಸರನ್ನು ಪ್ರಕಟಿಸಿದೆ. ಗಡುವು ಮುಗಿದರೂ ಸಹ 51 ಶಾಸಕರು ಮತ್ತು 21 ಎಂಎಲ್​ಸಿಗಳು ಇದುವರೆಗೂ ತಮ್ಮ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಎಂದು ತಿಳಿಸಲಾಗಿದೆ.

ಲೋಕಾಯುಕ್ತ ನಿಯಮ ಏನು?
ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಕಲಂ 22(1), ಕಲಂ 7ರ ಉಪಕಲಂ (1)ರಂತೆ ಸರಕಾರಿ ನೌಕರನಲ್ಲದ ಪ್ರತಿಯೊಬ್ಬ ಸಾರ್ವಜನಿಕರ ನೌಕರ ಈ ಕಾಯಿದೆಯಂತೆ, ಈ ಅಧಿನಿಯಮ ಜಾರಿಗೆ ಬಂದ ಮೂರು ತಿಂಗಳೊಳಗೆ ಮತ್ತು ಜೂನ್‌ಗಿಂತ ಮುಂಚಿತವಾಗಿ ಪ್ರತಿ ವರ್ಷವೂ ಪ್ರತಿ ವರ್ಷ ತನ್ನ ಮತ್ತು ಕುಟುಂಬದ ಸದಸ್ಯರ ಆಸ್ತಿ ವಿವರಗಳನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತರಿಗೆ ಸಲ್ಲಿಸಬೇಕೆಂಬ ನಿಯಮವಿದೆ. ಅದು ಕಡ್ಡಾಯ ಕೂಡ. ಒಂದು ವೇಳೆ ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಸಾರ್ವಜನಿಕ ಸೇವಕರಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಕ್ಷಮ ಪ್ರಾಧಿಕಾರ (ರಾಜ್ಯಪಾಲರು) ವರದಿ ಸಲ್ಲಿಸಬೇಕು. ಅಂತಹ ಶಾಸಕರ ಹೆಸರುಗಳನ್ನು ರಾಜ್ಯದಾದ್ಯಂತ ಪ್ರಸರಣ ಹೊಂದಿರುವ ಮೂರು ದಿನಪತ್ರಿಕೆಗಳಲ್ಲಿ ಪ್ರಕಟಿಸಲು ಕಾಯ್ದೆಯಲ್ಲಿ ಅವಕಾಶವಿದೆ.

ನಿಯಮದಂತೆ ಲೊಕಾಯುಕ್ತ ಇಲಾಖೆಯು ಆಸ್ತಿ ವಿವರಗಳನ್ನು ನೀಡದ ಶಾಸಕರು ಮತ್ತು ಎಂಎಲ್‌ಸಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ, ಜಮೀರ್‌ ಅಹಮದ್‌ ಖಾನ್‌ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿ ಇದೆ.

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

1 hour ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago