ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಬಿಐಗೆ ಸಲ್ಲಿಸಿರುವ ದಾಖಲೆಗಳನ್ನು ಲೋಕಾಯುಕ್ತಕ್ಕೂ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.
2013 ರಿಂದ 2018 ರವರೆಗೆ 74.93 ಕೋಟಿ ಮೌಲ್ಯದ ಆಸ್ತಿ ಸಂಪಾದನೆ ಆರೋಪ ಸಂಬಂಧ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ರದ್ದುಪಡಿಸಿದ್ದ ರಾಜ್ಯ ಸರ್ಕಾರವು ಬಳಿಕ ತನಿಖೆ ಲೋಕಾಯುಕ್ತಕ್ಕೆ ವಹಿಸಿತ್ತು. ಈ ಸಂಬಂಧ ಪ್ರಕರಣದ ತನಿಖಾಧಿಕಾರಿ ಎಂ.ಹೆಚ್. ಸತೀಶ್ ಅವರು ಬುಧವಾರ ಡಿಕೆಶಿಗೆ ನೋಟಿಸ್ ನೀಡಿದ್ದಾರೆ. ಈ ಹಿಂದೆ ಸಿಬಿಐ ತನಿಖಾಧಿಕಾರಿಗಳಿಗೆ ಒದಗಿಸಿದ ಮಾಹಿತಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಶಿವಕುಮಾರ್ ಏಪ್ರಿಲ್ 1, 2013 ರಿಂದ ಏಪ್ರಿಲ್ 30, 2018 ರ ಅವಧಿಯಲ್ಲಿ ಆದಾಯಕ್ಕೆ ಅಸಮಾನವಾಗಿ 74.93 ಕೋಟಿ ರೂಪಾಯಿಗಳಷ್ಟು ಸಂಪತ್ತನ್ನು ಸಂಗ್ರಹಿಸಿದ್ದಾರೆ ಎಂದು ಸಿಬಿಐ ಹೇಳಿತ್ತು. ಈ ಸಂಬಂಧ 2019 ರ ಸೆಪ್ಟೆಂಬರ್ 9 ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ ಭ್ರಷ್ಟಾಚಾರ ನಿಗ್ರಹ ಕಾಯಿದೆ ಅಡಿ ತನಿಖೆ ನಡೆಸಲು ಅಂದಿನ ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು.
ಇದನ್ನು ಪ್ರಶ್ನಿಸಿ ಶಿವಕುಮಾರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮತಿ ರದ್ದುಪಡಿಸಿ ಆದೇಶಿಸಿತ್ತು. ಈ ಸಂಬಂಧ ಸಿಬಿಐ ಕೂಡ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಯುತ್ತಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…