Categories: Uncategorized

ರಾಜ್ಯದಲ್ಲಿ ಮೂರು ದಿನ ಮೋದಿ ಠಿಕಾಣಿ

ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ‌ 7 ರಂದು ನಡೆಯಲಿದೆ.

ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು‌ ದಿನ ಠಿಕಾಣಿ ಹೂಡಿ‌ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಬೇಟೆ ನಡೆಸಲಿದ್ದಾರೆ.

ಮೋದಿ ಅವರು ಇಂದು (ಏ.27) ರಾತ್ರಿ 8.50ಕ್ಕೆ ಬೆಳಗಾವಿಗೆ‌ ಆಗಮಿಸಿ, ನಗರದ ಐಟಿಸಿ ಹೋಟೆಲ್​​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಏ.28 ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 11.55ಕ್ಕೆ ಬೆಳಗಾವಿಯಿಂದ ಶಿರಸಿಗೆ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1ಕ್ಕೆ ಉತ್ತರ ಕನ್ನಡದ‌ ಶಿರಸಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ 6 ಗಂಟೆಗೆ ಅಲ್ಲಿನ ಹೋಟೆಲ್​ವೊಂದರಲ್ಲಿ ತಂಗಲಿದ್ದಾರೆ.

ಹೊಸಪೇಟೆಯಿಂದ ‌ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಹೊರಡಲಿದ್ದಾರೆ.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

6 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

7 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

7 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

7 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

7 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

8 hours ago