ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು ದಿನ ಠಿಕಾಣಿ ಹೂಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಬೇಟೆ ನಡೆಸಲಿದ್ದಾರೆ.
ಮೋದಿ ಅವರು ಇಂದು (ಏ.27) ರಾತ್ರಿ 8.50ಕ್ಕೆ ಬೆಳಗಾವಿಗೆ ಆಗಮಿಸಿ, ನಗರದ ಐಟಿಸಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಏ.28 ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 11.55ಕ್ಕೆ ಬೆಳಗಾವಿಯಿಂದ ಶಿರಸಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1ಕ್ಕೆ ಉತ್ತರ ಕನ್ನಡದ ಶಿರಸಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ 6 ಗಂಟೆಗೆ ಅಲ್ಲಿನ ಹೋಟೆಲ್ವೊಂದರಲ್ಲಿ ತಂಗಲಿದ್ದಾರೆ.
ಹೊಸಪೇಟೆಯಿಂದ ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಹೊರಡಲಿದ್ದಾರೆ.
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…
ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…