ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು ದಿನ ಠಿಕಾಣಿ ಹೂಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಬೇಟೆ ನಡೆಸಲಿದ್ದಾರೆ.
ಮೋದಿ ಅವರು ಇಂದು (ಏ.27) ರಾತ್ರಿ 8.50ಕ್ಕೆ ಬೆಳಗಾವಿಗೆ ಆಗಮಿಸಿ, ನಗರದ ಐಟಿಸಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಏ.28 ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 11.55ಕ್ಕೆ ಬೆಳಗಾವಿಯಿಂದ ಶಿರಸಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1ಕ್ಕೆ ಉತ್ತರ ಕನ್ನಡದ ಶಿರಸಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ 6 ಗಂಟೆಗೆ ಅಲ್ಲಿನ ಹೋಟೆಲ್ವೊಂದರಲ್ಲಿ ತಂಗಲಿದ್ದಾರೆ.
ಹೊಸಪೇಟೆಯಿಂದ ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಹೊರಡಲಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…