ಬೆಳಗಾವಿ: ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.
ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಮೂರು ದಿನ ಠಿಕಾಣಿ ಹೂಡಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಬೇಟೆ ನಡೆಸಲಿದ್ದಾರೆ.
ಮೋದಿ ಅವರು ಇಂದು (ಏ.27) ರಾತ್ರಿ 8.50ಕ್ಕೆ ಬೆಳಗಾವಿಗೆ ಆಗಮಿಸಿ, ನಗರದ ಐಟಿಸಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಂತರ ಏ.28 ಬೆಳಿಗ್ಗೆ 11 ಗಂಟೆಗೆ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ 11.55ಕ್ಕೆ ಬೆಳಗಾವಿಯಿಂದ ಶಿರಸಿಗೆ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 1ಕ್ಕೆ ಉತ್ತರ ಕನ್ನಡದ ಶಿರಸಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ 4.05ಕ್ಕೆ ದಾವಣಗೆರೆಯಿಂದ ಹೊಸಪೇಟೆ ಕಡೆಗೆ ಹೊರಡುವ ಪ್ರಧಾನಿ ಮೋದಿ ಸಂಜೆ 4.50ಕ್ಕೆ ಹೊಸಪೇಟೆ ತಲುಪಲಿದ್ದಾರೆ. 5 ಗಂಟೆಗೆ ಹೊಸಪೇಟೆ ಸಮಾವೇಶದಲ್ಲಿ ಭಾಗಿಯಾಗಿ 6 ಗಂಟೆಗೆ ಅಲ್ಲಿನ ಹೋಟೆಲ್ವೊಂದರಲ್ಲಿ ತಂಗಲಿದ್ದಾರೆ.
ಹೊಸಪೇಟೆಯಿಂದ ಏಪ್ರಿಲ್ 29ರ ಬೆಳಗ್ಗೆ 11 ಗಂಟೆಗೆ ಮೋದಿ ನಿರ್ಗಮಿಸಿ, ಮಧ್ಯಾಹ್ನ 12.15ಕ್ಕೆ ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 1.05ಕ್ಕೆ ಬಾಗಲಕೋಟೆಯಿಂದ ಸೊಲ್ಲಾಪುರಕ್ಕೆ ಹೊರಡಲಿದ್ದಾರೆ.
ನವದೆಹಲಿ: ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಅವರು ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ…
ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಬಿಜೆಪಿಗೆ ಗುಡ್ಬೈ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ…
ಮೈಸೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರ ಸಹೋದರ ಎನ್.ಜೆ.ವಾಸುದೇವನ್ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಮೈಸೂರು ಜಿಲ್ಲೆಯ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ…
ಬೆಂಗಳೂರು: ರಾಜ್ಯಕ್ಕೆ ಜೂನ್.5ರಂದು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿ ಮುಂಗಾರು ಪ್ರವೇಶ ತಡ…