Uncategorized

ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಅಡ್ವಾಣಿ, ಜೋಶಿ ಆಗಮಿಸದಂತೆ ಮಂದಿರ ಟ್ರಸ್ಟ್‌ ಮನವಿ

ಅಯೋಧ್ಯೆ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ಬಿಜೆಪಿ ಮುತ್ಸದ್ಧಿಗಳಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿಯವರನ್ನು ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದಂತೆ ಮಂದಿರ ಟ್ರಸ್ಟ್‌ ಮನವಿ ಮಾಡಿದೆ.

ಈ ಇಬ್ಬರು ಹಿರಿಯ ಮುತ್ಸದ್ಧಿಗಳಿಗೆ ವಯಸ್ಸು ಮತ್ತು ಆರೋಗ್ಯ ಸಮಸ್ಯೆಯಿರುವ ಹಿನ್ನೆಲೆಯಲ್ಲಿ ೨೦೨೪ರ ಜನವರಿ ತಿಂಗಳಿನಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಗೈರುಹಾಜರಾಗುವ ಎಲ್ಲ ಸಾಧ್ಯತೆಗಳಿವೆ ಎಂದು ಮಂದಿರ ಟ್ರಸ್ಟ್ ಬಹಿರಂಗಪಡಿಸಿದೆ.

“ಅತ್ಯಂತ ಹಿರಿಯರಾಗಿರುವ ಎಲ್‌ ಕೆ ಅಡ್ವಾಣಿ ಮತ್ತು ಜೋಶಿ ಅವರಿಗೆ ಆರೋಗ್ಯ ಸಮಸ್ಯೆಯಿದ್ದು, ಈ ಹಿನ್ನೆಲೆಯಲ್ಲಿ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಗಮಿಸದಂತೆ ಮನವಿ ಮಾಡಿಕೊಳ್ಳಲಾಗಿದ್ದು, ಇದಕ್ಕೆ ಇಬ್ಬರೂ ಒಪ್ಪಿಕೊಂಡಿದ್ದಾರೆ” ಎಂದು ರಾಮಮಂದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

ಜನವರಿ 22ರಂದು ನಡೆಯುವ ಪ್ರತಿಷ್ಠೆ ಕಾರ್ಯಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಜನವರಿ 15ರ ವೇಳೆಗೆ ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳಲಿದ್ದು, ಪ್ರಾಣ ಪ್ರತಿಷ್ಠೆಯ ಪೂಜಾ ವಿಧಿವಿಧಾನಗಳು ಜನವರಿ 16ರಂದು ಆರಂಭವಾಗಿ 22ರವರೆಗೂ ಮುಂದುವರಿಯಲಿವೆ ಎಂದು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಗವಹಿಸಲಿದ್ದಾರೆ ಎಂದು ಟ್ರಸ್ಟಿ ರಾಯ್ ಸ್ಪಷ್ಟಪಡಿಸಿದರು.

 

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago