Uncategorized

ಮಂಡ್ಯ ಸಮ್ಮೇಳನ | ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ ನಡೆಯುತ್ತಿರುವ  87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಸಮ್ಮೇಳವನ್ನು ಯಶಸ್ವಿಗೊಳಿಸಬೇಕಾಗಿರುತ್ತದೆ. ಆದ್ದರಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಕನ್ನಡದ ಐಕ್ಯತೆಯ ಧೋತಕವಾಗಿ ನಮ್ಮ ಸಾಹಿತ್ಯ-ಸಂಸ್ಕೃತಿ-ಪರಂಪರೆಯನ್ನು ಬಿಂಬಿಸುವ ಹಾಗೂ ನಾಡು-ನುಡಿಯ ಬಗೆಗಿನ ಅಭಿಮಾನವನ್ನು ಮೂಡಿಸುವ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪಾನ್ಯಾಸಕರು ಭಾಗವಹಿಸುವ ಮೂಲಕ ಸಾಹಿತ್ಯಾಭಿರುಚಿ ಹೆಚ್ಚಿಸಿಕೊಳ್ಳವ ಮತ್ತು ಕನ್ನಡ ನಾಡು ನುಡಿ ಬಗ್ಗೆ ವಿವಿಧ ಗೋಷ್ಠಿಗಳು ಇರುವುದರಿಂದ ಜ್ಞಾನಾರ್ಜನ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಡಿಸೆಂಬರ್ 20 ಮತ್ತು 21 ರಂದು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ಎರಡು ದಿನಗಳ ರಜೆ ಘೋಷಿಸಿದೆ.

ಸದರಿ ರಜೆ ಅವಧಿಯನ್ನು ಸರ್ಕಾರಿ ರಜಾ ದಿನದಂದು ಸರಿದೂಗಿಸಿ ಪಾಠ-ಪ್ರವಚನ ನಡೆಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ ಕುಮಾರ  ಆದೇಶ ಹೊರಡಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ನಿಲ್ದಾಣದಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…

11 mins ago

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…

15 mins ago

ಓದುಗರ ಪತ್ರ: ಗರಳಪುರಿ ಉತ್ಸವ ಸ್ವಾಗತಾರ್ಹ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…

18 mins ago

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

3 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

3 hours ago