ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರ ಮನಸ್ಸು ಸಂಭ್ರಮದಲ್ಲಿ ತೇಲಾಡುತ್ತಿರುವಾಗಲೇ ಪೊಲೀಸರ ಅನುಮತಿ ಇಲ್ಲದಿದ್ದರೂ ಇತ್ತ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಪ್ರತಿ ವರ್ಷದಂತೆ ಕರ್ನಾಟಕ ರಾಜ್ಯೋತ್ಸವದಂದೇ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು.
ಬೆಳಗಾವಿ, ಬೀದರ, ನಿಪ್ಪಾಣಿ, ಕಾರವಾರ, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಎಂಇಎಸ್ ವತಿಯಿಂದ ನಡೆದ ಕರಾಳ ದಿನಾಚರಣೆಯಲ್ಲಿ ಕಾರ್ಯಕರ್ತರು ಸೇರಿ ಕನ್ನಡಿಗರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಧರ್ಮವೀರ ಸಂಭಾಜಿ ವೃತ್ತದಿಂದ ಆರಂಭಿಸಿದ ಸೈಕಲ್ ರ್ಯಾಲಿ ಹಾಗೂ ಕಾಲ್ನಡಿಗೆ ರ್ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ನಂತರ ಮರಾಠಾ ಮಂದಿರದಲ್ಲಿ ಸಭೆ ನಡೆಸಿ ಮುಕ್ತಾಯಗೊಳಿಸಿದರು.
ಕರ್ನಾಟಕ ಸರ್ಕಾರ ಸೇರಿದಂತೆ ನಾಡದ್ರೋಹಿ ಘೋಷಣೆಗಳನ್ನು ಕೂಗಿದ ಎಂಇಎಸ್ ಕಾರ್ಯಕರ್ತರ ಕರಾಳ ದಿನಾಚರಣೆ ರ್ಯಾಲಿಯಲ್ಲಿ ಚಿಕ್ಕ ಚಿಕ್ಕ ಮಕ್ಕಳನ್ನು ಸೇರಿದಿದ್ದರು. ಏನೂ ಅರಿಯದ ಮುಗ್ಧ ಮಕ್ಕಳ ತಲೆಯಲ್ಲಿಯೂ ನಾಡದ್ರೋಹದ ಬೀಜ ಬಿತ್ತುತ್ತಿರುವುದು ಕನ್ನಡಿಗರನ್ನು ಕೆರಳಿಸಿದೆ. ಚಿಕ್ಕ ಚಿಕ್ಕ ಮಕ್ಕಳು ಕಪ್ಪು ಬಟ್ಟೆ ಧರಿಸಿ, ಕಪ್ಪು ಪಟ್ಟಿ ಕಟ್ಟಿಕೊಂಡು, ಕೈಯಲ್ಲಿ ಕಪ್ಪು ಧ್ವಜ ಹಾಗೂ ಕರ್ನಾಟಕ ಸರ್ಕಾರ ವಿರುದ್ಧದ ಫಲಕಗಳನ್ನು ನೀಡಿದ್ದು ಅಸಹ್ಯ ಎನಿಸುವಂತಿತ್ತು.
ಕರಾಳ ದಿನಾಚರಣೆ ಹಿನ್ನೆಲೆಯಲ್ಲಿ ಧರ್ಮವೀರ ಸಂಭಾಜಿ ವೃತ್ತದಿಂದ ಮುಂದೆ ಸಾಗುವ ಎಲ್ಲ ಮಾರ್ಗಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಎಲ್ಲ ಕಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…