ದಾವಣಗೆರೆ: ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸ್ವಾಮೀಜಿಯವರು ಡಿಕೆಶಿ ಸಿಎಂ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಸಾಧ್ಯವಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ಇದನ್ನು ನಾವುಗಳು ಕೂಡ ಹೇಳೋಕೆ ಸಾಧ್ಯವಿಲ್ಲ ಎಂದರು.
ಮುಂದುವರಿದು ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿಗೆ ಆಗ್ರಹ ಕೇಳಿಬರುತ್ತಿರುವ ಸಂಬಂಧ ಮಾತನಾಡಿದ ಅವರು, ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲಾ ಸುಮ್ಮನೆ ಆಗಲ್ಲ. ಏನೇ ಮಾಡಿದರೂ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ರಾಜ್ಯ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಎಲ್ಲಾ ಶಾಸಕರು ಹಾಗೂ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಕೇವಲ ಊಹಾಪೋಹ. ಇದನ್ನು ಯಾರೂ ಕೂಡ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…