ದಾವಣಗೆರೆ: ಡಿ.ಕೆ.ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್ ಬೀಸಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸ್ವಾಮೀಜಿಯವರು ಡಿಕೆಶಿ ಸಿಎಂ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಸಾಧ್ಯವಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು. ಇದನ್ನು ನಾವುಗಳು ಕೂಡ ಹೇಳೋಕೆ ಸಾಧ್ಯವಿಲ್ಲ ಎಂದರು.
ಮುಂದುವರಿದು ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿಗೆ ಆಗ್ರಹ ಕೇಳಿಬರುತ್ತಿರುವ ಸಂಬಂಧ ಮಾತನಾಡಿದ ಅವರು, ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲಾ ಸುಮ್ಮನೆ ಆಗಲ್ಲ. ಏನೇ ಮಾಡಿದರೂ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ರಾಜ್ಯ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಎಲ್ಲಾ ಶಾಸಕರು ಹಾಗೂ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಕೇವಲ ಊಹಾಪೋಹ. ಇದನ್ನು ಯಾರೂ ಕೂಡ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…