Uncategorized

ಡಿಕೆಶಿಗೆ ಸಿಎಂ ಸ್ಥಾನ ನೀಡಿ ಎಂಬ ಚಂದ್ರಶೇಖರಶ್ರೀ ಹೇಳಿಕೆಗೆ ಶಾಮನೂರು ಶಿವಶಂಕರಪ್ಪ ಕಿಡಿ

ದಾವಣಗೆರೆ: ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆಗೆ ಟಾಂಗ್‌ ಕೊಟ್ಟ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಿಎಂ ಸಿದ್ದು ಪರ ಬ್ಯಾಟ್‌ ಬೀಸಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರು, ಸ್ವಾಮೀಜಿಯವರು ಡಿಕೆಶಿ ಸಿಎಂ ಆಗಬೇಕು ಎಂದಿದ್ದಾರೆ. ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಸಾಧ್ಯವಿಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ. ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಇದನ್ನು ನಾವುಗಳು ಕೂಡ ಹೇಳೋಕೆ ಸಾಧ್ಯವಿಲ್ಲ ಎಂದರು.

ಮುಂದುವರಿದು ಮಾತನಾಡಿದ ಶಾಮನೂರು ಶಿವಶಂಕರಪ್ಪ ಅವರು, ಹೆಚ್ಚುವರಿ ಡಿಸಿಎಂ ಸ್ಥಾನ ಸೃಷ್ಟಿಗೆ ಆಗ್ರಹ ಕೇಳಿಬರುತ್ತಿರುವ ಸಂಬಂಧ ಮಾತನಾಡಿದ ಅವರು, ಜಾತಿವಾರು ಡಿಸಿಎಂ ಕೇಳುತ್ತಿದ್ದಾರೆ. ಅದೆಲ್ಲಾ ಸುಮ್ಮನೆ ಆಗಲ್ಲ. ಏನೇ ಮಾಡಿದರೂ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದರು.

ರಾಜ್ಯ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದ್ದು, ಎಲ್ಲಾ ಶಾಸಕರು ಹಾಗೂ ಸಚಿವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿಎಂ ಬದಲಾವಣೆ ಕೇವಲ ಊಹಾಪೋಹ. ಇದನ್ನು ಯಾರೂ ಕೂಡ ನಂಬಬೇಡಿ ಎಂದು ಸ್ಪಷ್ಟನೆ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago