Categories: Uncategorized

ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

ಹೊಸದಿಲ್ಲಿ : ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ‘ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ, ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತ-ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿಪಕ್ಷಗಳು ಧ್ವನಿ ಎತ್ತಿವೆ.

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಿದ್ದರು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್ ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು.

ಸುಗಮವಾಗಿ ಕಲಾಪ ನಡೆಯಲು ಸಹಕಾರ ನೀಡಬೇಕು ಎಂದು ಜೆ.ಪಿ.ನಡ್ಡಾ ಅವರು ವಿಪಕ್ಷ ನಾಯಕರಲ್ಲಿ ಮನವಿ ಮಾಡಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ‘ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ಸಂಬಂಧಿಸಿದ ಟ್ರಂಪ್ ಅವರ ಹೇಳಿಕೆಗಳು, ಪಹಲ್ಗಾಮ್ ದಾಳಿಗೆ ಕಾರಣವಾದ ಲೋಪಗಳು, ಬಿಹಾರದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ (ಎಸ್‌ಐಆರ್) ಕುರಿತು ಪ್ರಧಾನಿ ಮೋದಿ ಅವರು ಉತ್ತರಿಸಬೇಕು’ ಎಂದು ಆಗ್ರಹಿಸಿರುವುದಾಗಿ ತಿಳಿಸಿದ್ದಾರೆ.

‘ನಮ್ಮ ಪಕ್ಷ ಎತ್ತಿರುವ ಪ್ರಮುಖ ವಿಷಯಗಳ ಕುರಿತು ಸಂಸತ್ತಿನಲ್ಲಿ ಹೇಳಿಕೆ ನೀಡುವುದು ಪ್ರಧಾನಿ ಮೋದಿಯವರ ಕರ್ತವ್ಯ. ಬಿಹಾರದ ಎಸ್‌ಐಆರ್ ಚುನಾವಣಾ ಹಗರಣ, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಟ್ರಂಪ್ ಅವರ ಹೇಳಿಕೆಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಲಾಯಿತು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಸಂಜಯ್ ಸಿಂಗ್ ತಿಳಿಸಿದ್ದಾರೆ.

‘ರಾಜ್ಯಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಫಲವಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸಂಸತ್ನಲ್ಲಿ ಇದರ ಬಗ್ಗೆ ಚರ್ಚಿಸಬೇಕು. ವಿಶೇಷವಾಗಿ ಒಡಿಶಾದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ದೂರಿರುವ ಬಿಜೆಡಿಯ ಸಸ್ಮಿತ್ ಪಾತ್ರ, ಇತ್ತೀಚಿನ ಕಾಲೇಜು ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಮತ್ತು 15 ವರ್ಷದ ಬಾಲಕನಿಗೆ ಪುರುಷರ ಗುಂಪೊಂದು ಬೆಂಕಿ ಹಚ್ಚಿದ ಘಟನೆಯನ್ನು ಉಲ್ಲೇಖಿಸುತ್ತಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ನ ಗೌರವ್ ಗೊಗೊಯ್ ಮತ್ತು ಜೈರಾಮ್ ರಮೇಶ್, ಎನ್ಸಿಪಿ (ಶರದ್ ಪವಾರ್ ಬಣ) ಸುಪ್ರಿಯಾ ಸುಳೆ, ಡಿಎಂಕೆಯ ಟಿ.ಆರ್. ಬಾಲು ಮತ್ತು ಆರ್ಪಿಐ (ಎ) ನಾಯಕ, ಕೇಂದ್ರ ಸಚಿವ ರಾಮದಾಸ್ ಅಠಾವಳೆ ಭಾಗವಹಿಸಿದ್ದರು.

ಕಾಂಗ್ರೆಸ್, ಬಿಜೆಪಿ, ಟಿಎಂಸಿ, ಡಿಎಂಕೆ, ಜೆಡಿಯು, ಸಿಪಿಎಂ, ಸಿಪಿಐ, ಶಿವಸೇನಾ, ಜನಸೇನಾ ಹಾಗೂ ಎನ್ಸಿಪಿ(ಎಸ್ಪಿ) ಪಕ್ಷಗಳಿಗೆ ಸೇರಿದ 50 ಸಂಸದರು ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಶೂನ್ಯ ವೇಳೆ ವಿವಿಧ ವಿಚಾರಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಲು ಸಜ್ಜಾಗಿದ್ದಾರೆ. ವಿವಿಧ ಪಕ್ಷಗಳ ಸಂಸದರಿಂದ 34 ಪ್ರಶ್ನೆಗಳ ಸಲ್ಲಿಕೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ಪೈಕಿ, ಏರ್ ಇಂಡಿಯಾ ವಿಮಾನ ಪತನಕ್ಕೆ ಸಂಬಂಧಿಸಿ ಲೋಕಸಭೆಯಲ್ಲಿ 23 ಪ್ರಶ್ನೆಗಳು ಹಾಗೂ ರಾಜ್ಯಸಭೆಯಲ್ಲಿ 11 ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago