ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಸಿಎಂ ಆಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ೪೦೦ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ದೂರು ನೀಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ಇನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರಮೇಶ್, ೧೯೯೭-೯೮ ರಲ್ಲಿ ಜೆಹೆಚ್ ಪಟೇಲ್ ಅವರ ಸರ್ಕಾರದಲ್ಲಿ ಡಿಸಿಎಂಯಾಗಿದ್ದ ಸಿದ್ದರಾಮಯ್ಯ ಅವರು ಸ್ವಾಧೀನ ಪಡಿಸಿಕೊಂಡ ದೇವನೂರು ಮೂರನೇ ಬಡಾವಣೆಯನ್ನು ಮುಡಾ ಕೈ ಬಿಡುವಂತೆ ಅಧಿಸೂಚನೆ ಹೊರಡಿಸಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅಲ್ಲದೆ ೨೦೦೪-೦೫ ರಲ್ಲಿ ಧರ್ಮಸಿಂಗ್ ಅವರ ಸರ್ಕಾರದಲ್ಲೂ ಡಿಸಿಎಂಯಾಗಿದ್ದ ಸಿದ್ದರಾಮಯ್ಯ ಅವರು ಇದೇ ಭೂಮಿಯನ್ನ ಮೃತ ಲಿಂಗ ಎಂಬ ಹೆಸರಿನ ವ್ಯಕ್ತಿಯ ಹೆಸರಿನಲ್ಲಿ ಭೂ ಪರಿವರ್ತನೆ ಮಾಡಿಸಿದ್ದರು ಎಂದು ಆರೋಪ ಮಾಡಿದರು.
ಅಲ್ಲದೆ ಮೊದಲ ಬಾರಿಗೆ ಸಿಎಂ ಆಗಿದ್ದ ವೇಳೆ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಮೈಸೂರಿನ ವಿಜಯನಗರದ ೨ ಮತ್ತು ೩ ಬಡಾವಣೆಯಲ್ಲಿ ಸುಮಾರು ೩೯ ಸಾವಿರ ಚದರ ಅಡಿನ ೧೪ ನಿವೇಶನಗಳನ್ನು ಬದಲಿ ನಿವೇಶನ ಹೆಸರಿನಲ್ಲಿ ತಮ್ಮ ಹೆಸರಿಗೆ ಮಾಡುವಂತೆ ಮುಡಾ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುತ್ತಾರೆ. ನಂತರ ೨೦೨೨ ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಮಯದಲ್ಲಿ ಈ ೧೪ ನಿವೇಶನಗಳನ್ನು ತಮ್ಮ ಪತ್ನಿ ಪಾರ್ವತಿ ಹೆಸರಿನಲ್ಲಿ ನೋಂದಣಿ ಮಾಡಿಸಿದ್ದಾರೆ. ದೇವನೂರು ಬಡಾವಣೆಯಲ್ಲಿ ಒಂದು ನಿವೇಶನ ಬೆಲೆ ೫-೬ ಕೋಟಿ ಇದ್ದರೆ, ವಿಜಯನಗರದಲ್ಲಿನ ೧೪ ಬಡಾವಣೆಗಳ ಬೆಲೆ ಸುಮಾರು ೫೦ ರಿಂದ ೬೦ ಕೋಟಿ. ಒಟ್ಟಿನಲ್ಲಿ ಪ್ರಭಾವಿ ಹುದ್ದೆಯಲ್ಲಿರುವಾಗಲೇ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಹಗರಣದಲ್ಲಿ ಭಾಗಿಯಾಗಿದ್ದಾರೆ. ಈಗಾಗಿ ಅವರ ವಿರುದ್ಧ ಹಾಗೂ ಆ ಸಮಯದಲ್ಲಿ ಮುಡಾದಲ್ಲಿದ್ದ ಅಧಿಕಾರಿಗಳ ವಿರುದ್ಧ ದೂರು ಕೊಟ್ಟಿದ್ದೇನೆ ಎಂದು ಹೇಳಿದರು.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…