Change in State Politics is Certain: Minister K.N. Rajanna
ತುಮಕೂರು : ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ಪಡೆದುಕೊಳ್ಳುವುದು ಸರ್ಕಾರದ ಅನುಮತಿ ಕಡ್ಡಾಯಕ್ಕೆ ಕಾಂಗ್ರೆಸ್ ಶಾಸಕರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎನ್. ರಾಜಣ್ಣ, ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ ಎಂದು ಪ್ರಶ್ನಿಸಿದರು.
ನಮಾಜ್ ಮಾಡಲು ಅನುಮತಿ ಕೇಳಿಕೊಂಡು ಮುಸ್ಲಿಮರು ಬರುತ್ತಾರೆಯೇ? ಅನುಮತಿ ಪಡೆಯದೇ ರಸ್ತೆಯಲ್ಲಿ ನಮಾಜ್ ಮಾಡಿದರೆ ಅದನ್ನು ತಡೆಯುವ ಶಕ್ತಿ ಇದೆಯೇ? ಜಾರಿ ಮಾಡಲು ಸಾಧ್ಯವಾಗುವ ಕಾನೂನನ್ನು ಜಾರಿಗೆ ತರಬೇಕೇ ಹೊರತು, ಜಾರಿ ಮಾಡಲಾಗದ ಕಾನೂನುಗಳನ್ನು ಜಾರಿಗೆ ತಂದರೆ, ಅದು ಪುಸ್ತಕದಲ್ಲಿ ಮಾತ್ರವೇ ಇರುತ್ತದೆ. ಈ ನಿಯಮ ಯಾವ ಪ್ರಮಾಣದಲ್ಲಿ ಜಾರಿಗೆ ಬರುತ್ತದೆ ಕಾದು ನೋಡೋಣ ಎಂದರು.
ಇದಕ್ಕೂ ಮುನ್ನಾ ಜಾಗೃತ ಕರ್ನಾಟಕ ಆಯೋಜಿಸಿದ್ದ “ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ’ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಕೆ.ಎನ್. ರಾಜಣ್ಣ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಮೀಸಲು ಕ್ಷೇತ್ರವೇ ಯಾಕೆ ಬೇಕು? ಅವರು ಸಾಮಾನ್ಯ ಕ್ಷೇತ್ರದಲ್ಲಿ ಯಾಕೆ ನಿಲ್ಲಬಾರದು? ಅವರು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದರೆ ಮೀಸಲು ಕ್ಷೇತ್ರದಿಂದ ಮತ್ತೊಬ್ಬರಿಗೆ ಅವಕಾಶ ದೊರೆಯುತ್ತದೆ ಅಲ್ಲವೇ ಎಂದು ಹೇಳಿದರು.
ಮೀಸಲು ಕ್ಷೇತ್ರ ಬಿಟ್ಟುಕೊಡುವ ಮನ:ಸ್ಥಿತಿ ನಮ್ಮಲ್ಲಿ ಬರಬೇಕು. ಎಲ್ಲವನ್ನು ನಾವೇ ಬಳಸಿಕೊಂಡು ಕೂತರೆ ಬೇರೆಯವರು ಎಲ್ಲಿಗೆ ಹೋಗುತ್ತಾರೆ. ನಮ್ಮಲ್ಲಿ ಧೈರ್ಯದ ಕೊರತೆಯಿದ್ದು, ಅದು ಹೋಗಬೇಕು ಎಂದು ಪರಮೇಶ್ವರ್ ಅವರಿಗೆ ಸಲಹೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್. ಕಾಂತರಾಜು, ಜಯಪ್ರಕಾಶ್ ಹೆಗ್ಡೆ ನೇತೃತ್ವದ ವರದಿ ಜಾರಿ ಮಾಡುವ ಮನಸ್ಥಿತಿ ಹೊಂದಿದ್ದರು. ಆದರೆ, ವರದಿ ಜಾರಿಗೊಳಿಸದಂತೆ ಕಾಂಗ್ರೆಸ್ ನಾಯಕರೇ ಅವರ ಮೇಲೆ ಒತ್ತಡ ಹಾಕಿದರು. ಹೀಗಾಗಿ ಮತ್ತೊಂದು ಸಮೀಕ್ಷೆ ನಡೆಸುವ ನಿರ್ಣಯ ಕೈಗೊಳ್ಳಬೇಕಾಯಿತು ಎಂದು ತಿಳಿಸಿದರು.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…