Shobha Karandlaje
ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ ಕಾಯ್ದೆಯಡಿ ಬಂಧಿಸುವುದಾದರೆ ಮೊದಲು ನಾರಾ ಭರತ್ರೆಡ್ಡಿ ಆಪ್ತ ಸತೀಶ್ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಸರ್ಕಾರ ಈ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದ್ವೇಷಭಾಷಣ ವಿಧೇಯಕ ಬಿಜೆಪಿಯವರನ್ನು ಗುರಿಯಾಗಿಟ್ಟುಕೊಂಡು ಜಾರಿ ಮಾಡಲು ಸರ್ಕಾರ ಹೊರಟಿದೆ. ನಾವು ಮಾತನಾಡಿದರೆ ದ್ವೇಷಭಾಷಣ. ಹಾಗಾದರೆ ಕಾಂಗ್ರೆಸ್ ಶಾಸಕ ಬಳ್ಳಾರಿಗೆ ಬೆಂಕಿ ಹಚ್ಚುತ್ತೇನೆಂದು ಹೇಳುತ್ತಿರುವುದು ಶಾಂತಿ ಸಂದೇಶವೇ ಎಂದು ತರಾಟೆಗೆ ತೆಗೆದುಕೊಂಡರು.
ನಮ್ಮ ಗೃಹಸಚಿವರಾದ ಡಾ.ಜಿ.ಪರಮೇಶ್ವರ್ರವರಿಗೆ ಬೇರೆ ಯಾವುದೇ ವಿಚಾರಗಳೂ ಗೊತ್ತಿರುವುದಿಲ್ಲ. ಏನೇ ಕೇಳಿದರೂ ಗೊತ್ತಿಲ್ಲ ಎಂದು ಸಿದ್ಧಪಡಿಸಿದ ಉತ್ತರ ಕೊಡುತ್ತಾರೆ. ಆದರೆ ಬಳ್ಳಾರಿ ಎಸ್ಪಿ ಘಟನೆ ನಡೆದ ದಿನ ಕುಡಿದು ಮಲಗಿದ್ದರು ಎಂದು ಇವರಿಗೆ ಯಾರು ಹೇಳಿದ್ದರು? ಎಂದು ಪ್ರಶ್ನಿಸಿದರು.
ನಾರಾ ಭರತ್ರೆಡ್ಡಿಗೆ ಎಷ್ಟು ದುರಹಂಕಾರ ಎಂದರೆ ಇಡೀ ಬಳ್ಳಾರಿಗೇ ಬೆಂಕಿ ಹಚ್ಚುತ್ತೇನೆ ಎಂದು ಹೇಳುತ್ತಾರೆ. ಚಿಕ್ಕ ವಯಸ್ಸು, ರಾಜಕೀಯದಲ್ಲಿ ಬೆಳೆಯಲು ಇನ್ನೂ ಅವಕಾಶವಿತ್ತು. ಇಂತಹ ದುರಹಂಕಾರಿಗಳಿಗೆ ಸರ್ಕಾರ ಸರಿಯಾದ ಪಾಠ ಕಲಿಸಬೇಕೆಂದು ಒತ್ತಾಯಿಸಿದರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…