Categories: Uncategorized

ನಾರಾ ಭರತ್‌ ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಬಳ್ಳಾರಿ ಗಲಭೆಗೆ ಕಾರಣಕರ್ತರಾದ ಶಾಸಕ ನಾರಾ ಭರತ್‍ರೆಡ್ಡಿಯನ್ನು ದ್ವೇಷಭಾಷಣ ಕಾಯ್ದೆಯಡಿ ಬಂಧಿಸಿ ಸರ್ಕಾರ ಜೈಲಿಗೆ ಏಕೆ ಹಾಕಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ವಿಧಾನಮಂಡಲದ ಉಭಯಸದನಗಳಲ್ಲಿ ಅಂಗೀಕರಿಸಿರುವ ಕರ್ನಾಟಕ ದ್ವೇಷಭಾಷಣ ನಿಯಂತ್ರಣ ಕಾಯ್ದೆಯಡಿ ಬಂಧಿಸುವುದಾದರೆ ಮೊದಲು ನಾರಾ ಭರತ್‍ರೆಡ್ಡಿ ಆಪ್ತ ಸತೀಶ್‍ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಸರ್ಕಾರ ಈ ಪ್ರಕರಣದಲ್ಲಿ ಯಾರನ್ನು ರಕ್ಷಣೆ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದ್ವೇಷಭಾಷಣ ವಿಧೇಯಕ ಬಿಜೆಪಿಯವರನ್ನು ಗುರಿಯಾಗಿಟ್ಟುಕೊಂಡು ಜಾರಿ ಮಾಡಲು ಸರ್ಕಾರ ಹೊರಟಿದೆ. ನಾವು ಮಾತನಾಡಿದರೆ ದ್ವೇಷಭಾಷಣ. ಹಾಗಾದರೆ ಕಾಂಗ್ರೆಸ್ ಶಾಸಕ ಬಳ್ಳಾರಿಗೆ ಬೆಂಕಿ ಹಚ್ಚುತ್ತೇನೆಂದು ಹೇಳುತ್ತಿರುವುದು ಶಾಂತಿ ಸಂದೇಶವೇ ಎಂದು ತರಾಟೆಗೆ ತೆಗೆದುಕೊಂಡರು.

ನಮ್ಮ ಗೃಹಸಚಿವರಾದ ಡಾ.ಜಿ.ಪರಮೇಶ್ವರ್‍ರವರಿಗೆ ಬೇರೆ ಯಾವುದೇ ವಿಚಾರಗಳೂ ಗೊತ್ತಿರುವುದಿಲ್ಲ. ಏನೇ ಕೇಳಿದರೂ ಗೊತ್ತಿಲ್ಲ ಎಂದು ಸಿದ್ಧಪಡಿಸಿದ ಉತ್ತರ ಕೊಡುತ್ತಾರೆ. ಆದರೆ ಬಳ್ಳಾರಿ ಎಸ್ಪಿ ಘಟನೆ ನಡೆದ ದಿನ ಕುಡಿದು ಮಲಗಿದ್ದರು ಎಂದು ಇವರಿಗೆ ಯಾರು ಹೇಳಿದ್ದರು? ಎಂದು ಪ್ರಶ್ನಿಸಿದರು.

ನಾರಾ ಭರತ್‍ರೆಡ್ಡಿಗೆ ಎಷ್ಟು ದುರಹಂಕಾರ ಎಂದರೆ ಇಡೀ ಬಳ್ಳಾರಿಗೇ ಬೆಂಕಿ ಹಚ್ಚುತ್ತೇನೆ ಎಂದು ಹೇಳುತ್ತಾರೆ. ಚಿಕ್ಕ ವಯಸ್ಸು, ರಾಜಕೀಯದಲ್ಲಿ ಬೆಳೆಯಲು ಇನ್ನೂ ಅವಕಾಶವಿತ್ತು. ಇಂತಹ ದುರಹಂಕಾರಿಗಳಿಗೆ ಸರ್ಕಾರ ಸರಿಯಾದ ಪಾಠ ಕಲಿಸಬೇಕೆಂದು ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

54 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

57 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago