Categories: Uncategorized

ನ. 13ರಿಂದ 20ರವರೆಗೆ ಸರಿ-ಬೆಸ ನಿಯಮ: ದೆಹಲಿ ಪರಿಸರ ಸಚಿವ ಘೋಷಣೆ

ನವದೆಹಲಿ : ರಾಷ್ಟ್ರೀಯ ರಾಜಧಾನಿ ದಿಲ್ಲಿಯಲ್ಲಿ ಕಾರುಗಳಿಗೆ ಅನ್ವಯಿಸುವ ಸರಿ-ಬೆಸ ನಿಯಮವು ನವೆಂಬರ್ 13ರಿಂದ 20ರವರೆಗೆ ಜಾರಿಯಲ್ಲಿರುತ್ತದೆ ಎಂದು ದಿಲ್ಲಿ ಪರಿಸರ ಸಚಿವ ಗೋಪಾಲ್ ರೈ ಸೋಮವಾರ ಪ್ರಕಟಿಸಿದ್ದಾರೆ. ಅದೇ ವೇಳೆ, ಕುಸಿಯುತ್ತಿರುವ ವಾಯು ಗುಣಮಟ್ಟದ ಹಿನ್ನೆಲೆಯಲ್ಲಿ, 10 ಮತ್ತು 12ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ತರಗತಿಗಳು ನವೆಂಬರ್ 10ರವರೆಗೆ ಮುಚ್ಚಿರುತ್ತವೆ ಎಂದು ಅವರು ಹೇಳಿದರು.

ಬಿಎಸ್‌3 ಪೆಟ್ರೋಲ್ ಮತ್ತು ಬಿಎಸ್‌4 ಡೀಸೆಲ್ ಕಾರುಗಳ ಮೇಲೆ ದಿಲ್ಲಿಯಲ್ಲಿ ಹೇರಲಾಗಿರುವ ನಿಷೇಧ ಮುಂದುವರಿಯುತ್ತದೆ ಹಾಗೂ ನಗರದಲ್ಲಿ ಯಾವುದೇ ನಿರ್ಮಾಣ ಸಂಬಂಧಿ ಕಾಮಗಾರಿ ನಡೆಯುವುದಿಲ್ಲ ಎಂದು ರೈ ಹೇಳಿದರು.

ಸರಿ-ಬೆಸ ನಿಯಮದ ಪ್ರಕಾರ, ಕಾರುಗಳ ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆಯ ಆಧಾರದಲ್ಲಿ ದಿನ ಬಿಟ್ಟು ದಿನ ಅವುಗಳನ್ನು ರಸ್ತೆಗೆ ಇಳಿಸಬಹುದಾಗಿದೆ. ಬೆಸ ಸಂಖ್ಯೆಯ ದಿನದಂದು, ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆ 1, 3, 5,7 ಮತ್ತು 9 ಆಗಿರುವ ಕಾರುಗಳು ಮತ್ತು ಸರಿ ಸಂಖ್ಯೆಯ ದಿನದಂದು ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆ 0, 2, 4, 6 ಮತ್ತು 8 ಆಗಿರುವ ಕಾರುಗಳು ರಸ್ತೆಗಿಳಿಯಬಹುದಾಗಿದೆ.

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಗೋಪಾಲ್ ರೈ ಈ ಘೋಷಣೆಯನ್ನು ಹೊರಡಿಸಿದರು. ಸಂಬಂಧಿತ ಇತರ ಇಲಾಖೆಗಳ ಅಧಿಕಾರಿಗಳು, ದಿಲ್ಲಿ ಶಿಕ್ಷಣ ಸಚಿವೆ ಆತಿಶಿ ಮತ್ತು ಸಚಿವರಾದ ಸೌರಭ್ ಭಾರದ್ವಾಝ್ ಮತ್ತು ಖೈಲಾಶ್ ಗಹ್ಲೋಟ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದರು.

ವಾಯು ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಗ್ರೇಡಡ್ ರೆಸ್ಪಾನ್ಸ್ ಆ್ಯಕ್ಷನ್ ಪ್ಲ್ಯಾನ್ (ಜಿಆರ್‌ಎಪಿ)ನ ನಾಲ್ಕನೇ ಹಂತದಲ್ಲಿ ದಿಲ್ಲಿಯನ್ನು ರವಿವಾರ ಇರಿಸಲಾಗಿದೆ. ಇದು ಮಾಲಿನ್ಯ ನಿಗ್ರಹ ಯೋಜನೆಯಲ್ಲಿ ಕೊನೆಯ ಹಂತವಾಗಿದೆ.

ವಾಯು ಮಾಲಿನ್ಯ ನಿಗ್ರಹ ಯೋಜನೆಯ ಅಂತಿಮ ಹಂತದಲ್ಲಿ, ಸರಕಾರಿ ಮತ್ತು ಖಾಸಗಿ ಕಚೇರಿಗಳ 50 ಶೇಕಡ ಉದ್ಯೋಗಿಗಳು ಮನೆಯಲ್ಲಿ ಕೆಲಸ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ. ಟ್ರಕ್‌ಗಳು ದಿಲ್ಲಿ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

https://x.com/AamAadmiParty/status/1721478969390932185?s=20

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

47 mins ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

49 mins ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

51 mins ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

52 mins ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

55 mins ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

60 mins ago