Categories: Uncategorized

ನ. 13ರಿಂದ 20ರವರೆಗೆ ಸರಿ-ಬೆಸ ನಿಯಮ: ದೆಹಲಿ ಪರಿಸರ ಸಚಿವ ಘೋಷಣೆ

ನವದೆಹಲಿ : ರಾಷ್ಟ್ರೀಯ ರಾಜಧಾನಿ ದಿಲ್ಲಿಯಲ್ಲಿ ಕಾರುಗಳಿಗೆ ಅನ್ವಯಿಸುವ ಸರಿ-ಬೆಸ ನಿಯಮವು ನವೆಂಬರ್ 13ರಿಂದ 20ರವರೆಗೆ ಜಾರಿಯಲ್ಲಿರುತ್ತದೆ ಎಂದು ದಿಲ್ಲಿ ಪರಿಸರ ಸಚಿವ ಗೋಪಾಲ್ ರೈ ಸೋಮವಾರ ಪ್ರಕಟಿಸಿದ್ದಾರೆ. ಅದೇ ವೇಳೆ, ಕುಸಿಯುತ್ತಿರುವ ವಾಯು ಗುಣಮಟ್ಟದ ಹಿನ್ನೆಲೆಯಲ್ಲಿ, 10 ಮತ್ತು 12ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ತರಗತಿಗಳು ನವೆಂಬರ್ 10ರವರೆಗೆ ಮುಚ್ಚಿರುತ್ತವೆ ಎಂದು ಅವರು ಹೇಳಿದರು.

ಬಿಎಸ್‌3 ಪೆಟ್ರೋಲ್ ಮತ್ತು ಬಿಎಸ್‌4 ಡೀಸೆಲ್ ಕಾರುಗಳ ಮೇಲೆ ದಿಲ್ಲಿಯಲ್ಲಿ ಹೇರಲಾಗಿರುವ ನಿಷೇಧ ಮುಂದುವರಿಯುತ್ತದೆ ಹಾಗೂ ನಗರದಲ್ಲಿ ಯಾವುದೇ ನಿರ್ಮಾಣ ಸಂಬಂಧಿ ಕಾಮಗಾರಿ ನಡೆಯುವುದಿಲ್ಲ ಎಂದು ರೈ ಹೇಳಿದರು.

ಸರಿ-ಬೆಸ ನಿಯಮದ ಪ್ರಕಾರ, ಕಾರುಗಳ ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆಯ ಆಧಾರದಲ್ಲಿ ದಿನ ಬಿಟ್ಟು ದಿನ ಅವುಗಳನ್ನು ರಸ್ತೆಗೆ ಇಳಿಸಬಹುದಾಗಿದೆ. ಬೆಸ ಸಂಖ್ಯೆಯ ದಿನದಂದು, ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆ 1, 3, 5,7 ಮತ್ತು 9 ಆಗಿರುವ ಕಾರುಗಳು ಮತ್ತು ಸರಿ ಸಂಖ್ಯೆಯ ದಿನದಂದು ನಂಬರ್ ಪ್ಲೇಟ್‌ಗಳ ಕೊನೆಯ ಅಂಕೆ 0, 2, 4, 6 ಮತ್ತು 8 ಆಗಿರುವ ಕಾರುಗಳು ರಸ್ತೆಗಿಳಿಯಬಹುದಾಗಿದೆ.

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಗೋಪಾಲ್ ರೈ ಈ ಘೋಷಣೆಯನ್ನು ಹೊರಡಿಸಿದರು. ಸಂಬಂಧಿತ ಇತರ ಇಲಾಖೆಗಳ ಅಧಿಕಾರಿಗಳು, ದಿಲ್ಲಿ ಶಿಕ್ಷಣ ಸಚಿವೆ ಆತಿಶಿ ಮತ್ತು ಸಚಿವರಾದ ಸೌರಭ್ ಭಾರದ್ವಾಝ್ ಮತ್ತು ಖೈಲಾಶ್ ಗಹ್ಲೋಟ್ ಮುಂತಾದವರು ಸಭೆಯಲ್ಲಿ ಭಾಗವಹಿಸಿದರು.

ವಾಯು ಗುಣಮಟ್ಟ ತೀವ್ರವಾಗಿ ಹದಗೆಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಗ್ರೇಡಡ್ ರೆಸ್ಪಾನ್ಸ್ ಆ್ಯಕ್ಷನ್ ಪ್ಲ್ಯಾನ್ (ಜಿಆರ್‌ಎಪಿ)ನ ನಾಲ್ಕನೇ ಹಂತದಲ್ಲಿ ದಿಲ್ಲಿಯನ್ನು ರವಿವಾರ ಇರಿಸಲಾಗಿದೆ. ಇದು ಮಾಲಿನ್ಯ ನಿಗ್ರಹ ಯೋಜನೆಯಲ್ಲಿ ಕೊನೆಯ ಹಂತವಾಗಿದೆ.

ವಾಯು ಮಾಲಿನ್ಯ ನಿಗ್ರಹ ಯೋಜನೆಯ ಅಂತಿಮ ಹಂತದಲ್ಲಿ, ಸರಕಾರಿ ಮತ್ತು ಖಾಸಗಿ ಕಚೇರಿಗಳ 50 ಶೇಕಡ ಉದ್ಯೋಗಿಗಳು ಮನೆಯಲ್ಲಿ ಕೆಲಸ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ. ಟ್ರಕ್‌ಗಳು ದಿಲ್ಲಿ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

https://x.com/AamAadmiParty/status/1721478969390932185?s=20

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago