Uncategorized

ಐದು ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ಕೊಪ್ಪಳ : ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದ್ದು, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಧಿಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು.

ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು.

ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು.

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು.

andolanait

Recent Posts

ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಸಂಚು: ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿ

ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್‌ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…

8 hours ago

ವಾಟಾಳ್‌ ನಾಗರಾಜ್‌ಗೆ ಬಿಗ್‌ ರಿಲೀಫ್:‌ 10 ಕೇಸ್‌ಗಳು ವಾಪಸ್‌

ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ರಾಜ್ಯ ಸರ್ಕಾರ ರಿಲೀಫ್‌ ನೀಡಿದೆ. ವಾಟಾಳ್‌ ನಾಗರಾಜ್‌ ಮೇಲಿನ ಕೇಸ್‌ಗಳನ್ನು ಸರ್ಕಾರ ಹಿಂಪಡೆಯಲು…

8 hours ago

52 ಪ್ರಕರಣಗಳನ್ನು ಹಿಂಪಡೆಯಲು ಸಂಪುಟ ಸಭೆಯಲ್ಲಿ ತೀರ್ಮಾನ: ಸಚಿವ ಪರಮೇಶ್ವರ್

ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌…

9 hours ago

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…

10 hours ago

ಕೋವಿಡ್‌ಗಿಂತಲೂ ಡೆಡ್ಲಿ ಎಬೋಲಾ ವೈರಸ್:‌ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲು ಕೇಂದ್ರ ಸೂಚನೆ

ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್‌ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್‌ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…

10 hours ago

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

12 hours ago