Uncategorized

ಐದು ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ಕೊಪ್ಪಳ : ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದ್ದು, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಧಿಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು.

ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು.

ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು.

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

4 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

5 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago