Uncategorized

ಐದು ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ: ಸಿಎಂ ಸಿದ್ದರಾಮಯ್ಯ

ಕೊಪ್ಪಳ : ರಾಜ್ಯದ ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ನಾವು ಐದು ವರ್ಷ ಆಡಳಿತ ನಡೆಸುತ್ತೇವೆ, ಕಾಂಗ್ರೆಸ್ ಸರ್ಕಾರ ಅವಧಿ ಪೂರೈಸಲಿದ್ದು, ನಂತರ ಚುನಾವಣೆಗೆ ಹೋಗುತ್ತೇವೆ ಮತ್ತೆ ಮರು ಆಯ್ಕೆಯಾಗುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಅಧಿಕಾರ ಹಂಚಿಕೆ ಸೂತ್ರದ ಕುರಿತು ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಯವರು, ಎರಡುವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ಅಧಿಕಾರ ಹಂಚಿಕೆ ವದ್ಧಂತಿಯ ಬಗ್ಗೆ ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಜನ 135 ಜನ ಶಾಸಕರನ್ನು ಗೆಲ್ಲಿಸಿ ಐದು ವರ್ಷ ಆಡಳಿತ ನಡೆಸಲು ಆಶೀರ್ವದಿಸಿದ್ದಾರೆ. ಅದರಂತೆ ನಡೆದುಕೊಳ್ಳುತ್ತೇವೆ ಎಂದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್‍ಸಿಂಗ್ ಸುರ್ಜೇವಾಲ ಅವರು ನಿನ್ನೆ ಬೆಂಗಳೂರಿಗೆ ಬಂದಿದ್ದು ಸಂಸತ್ ಚುನಾವಣೆ ಕುರಿತು ಚರ್ಚೆ ಮಾಡಿದ್ದಾರೆ. ಕೆಲ ಶಾಸಕರನ್ನು ನಿಗಮ ಮಂಡಳಿಗಳಿಗೆ ನೇಮಕ ಮಾಡಲು ನಿರ್ಧರಿಸಲಾಗಿದೆ. ಅದರ ಬಗ್ಗೆಯೂ ಚರ್ಚೆ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಬಿಜೆಪಿಯವರು ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ನಡೆಸುವ ಮೊದಲು ಕೇಂದ್ರದಿಂದ ಅನುದಾನ ಕೊಡಿಸಲಿ. ರಾಜ್ಯದಲ್ಲಿ 32 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. 17 ಸಾವಿರ ರೂಪಾಯಿ ಕೋಟಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿದೆ. ಮೊದಲು ಅದಕ್ಕೆ ಕೇಂದ್ರ ಸ್ಪಂದಿಸಲಿ ಎಂದರು.

ಕೇಂದ್ರ ಸರ್ಕಾರ ಅನುದಾನ ನೀಡದಿದ್ದರೂ ರಾಜ್ಯ ಸರ್ಕಾರ ಬರ ನಿರ್ವಹಣೆಗೆ 900 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜಿಲ್ಲಾಕಾರಿಗಳ ವೈಯಕ್ತಿಕ ಖಾತೆಯಲ್ಲಿ 400 ಕೋಟಿ ರೂಪಾಯಿ ಇದೆ. ಕುಡಿಯುವ ನೀರು ಸೇರಿದಂತೆ ಗಂಭೀರ ಸಮಸ್ಯೆಗಳಿಗೆ ತಕ್ಷಣ ಹಣ ಬಿಡುಗಡೆ ಮಾಡಲು ಸರ್ಕಾರ ಸಿದ್ಧವಿದೆ. ಜೊತೆ ಪ್ರತಿಕ್ಷೇತ್ರಕ್ಕೆ ಒಂದು ಕೋಟಿ ರೂಪಾಯಿ ನೀಡಿದ್ದೇವೆ ಎಂದರು.

ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ 600 ಕೋಟಿ ರೂಪಾಯಿ ಬಾಕಿಯನ್ನು ನೀಡಿಲ್ಲ. ರಾಜ್ಯದಲ್ಲಿ ಇರುವ 26 ಸಂಸದರು ಏನು ಮಾಡುತ್ತಿದ್ದಾರೆ. ದೆಹಲಿಗೆ ಹೋಗಿ ಪ್ರಧಾನಿಯವರನ್ನು ಭೇಟಿ ಮಾಡಿ ಏಕೆ ಒತ್ತಡ ಹೇರುತ್ತಿಲ್ಲ. ನಾವು ಪ್ರಧಾನಿಯವರನ್ನು ಭೇಟಿ ಮಾಡಲು ಯತ್ನಿಸಿದರೂ ಸಮಯ ನೀಡುತ್ತಿಲ್ಲ. ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ವಿವರಣೆ ನೀಡಲು ನಮ್ಮ ಸಚಿವರಾದ ಕೃಷ್ಣ ಬೈರೇಗೌಡ, ಚಲುವರಾಯಸ್ವಾಮಿ ದೆಹಲಿಗೆ ಹೋಗಿ ಭೇಟಿ ಮಾಡಲು ಯತ್ನಿಸಿದರು ಕೇಂದ್ರ ಸಚಿವರು ಸಮಯ ನೀಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ಅವರ ಪಕ್ಷದ ಹೈಕಮಾಂಡ್ ನಾಯಕರು ಸಿಗುತ್ತಿಲ್ಲ, ಇನ್ನೂ ನಮಗೆ ಸಿಗುತ್ತಾರಾ ಎಂದು ತಿರುಗೇಟು ನೀಡಿದರು.

ಸೋತು ಮನೆಯಲ್ಲಿರುವ ರಮೇಶ್ ಜಾರಕಿಹೊಳಿ ಸೇರಿದಂತೆ ಬಿಜೆಪಿಯ ನಾಯಕರ ಟೀಕೆಗಳಿಗೆ ನಾವು ಉತ್ತರ ನೀಡುವ ಅಗತ್ಯ ಇಲ್ಲ. ಬಿಜೆಪಿಯವರು ರಾಜ್ಯವನ್ನು ದಿವಾಳಿ ಮಾಡಿದ್ದರೂ ನಾವು ಪಂಚಖಾತ್ರಿ ಯೋಜನೆ ಜಾರಿಗೆ ತಂದಿದ್ದೇವೆ. ಅದರ ಬಗ್ಗೆ ಮೊದಲು ಚರ್ಚೆ ಮಾಡಲಿ ಎಂದರು.

ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಅವರು ನನ್ನ ಬಳಿ ಯಾವ ಚರ್ಚೆಯನ್ನೂ ಮಾಡಿಲ್ಲ. ಖಾಸಗಿಯಾಗಿ ಪ್ರವಾಸ ಮಾಡಿದರೆ ಅದು ಯಾಕೆ ಚರ್ಚೆಯಾಗಬೇಕು, ಸರ್ಕಾರದ ಹಣದಲ್ಲಿ ಪ್ರವಾಸ ಮಾಡಿದರೆ ಪ್ರಶ್ನೆ ಮಾಡಬೇಕು. ಇಲ್ಲವಾದರೆ ಯಾಕೆ ಅಡ್ಡಿ ಪಡಿಸಬೇಕು ಎಂದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago