ನವದೆಹಲಿ: ಪಾಕಿಸ್ತಾನ ದೇಶದ ವಿದೇಶಾಂಗ ಕಚೇರಿಯೂ, ಬಲೂಚಿಸ್ತಾನದಲ್ಲಿ ನಡೆದ ಜಾಫರ್ ಎಕ್ಸ್ಪ್ರೆಸ್ ರೈಲು ಅಪಹರಣದಲ್ಲಿ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದರು, ಇದೀಗ ಪಾಕ್ ಆರೋಪಕ್ಕೆ ಖಡಕ್ ಆಗಿ ಭಾರತ ತಿರುಗೇಟು ನೀಡಿದೆ.
ಈ ಕುರಿತು ಪ್ರತಿಕಿಯೆ ನೀಡಿದ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವು, ಪಾಕಿಸ್ತಾನದ ಆರೋಪ ಆಧಾರ ರಹಿತವಾಗಿದೆ. ಜಾಗತಿಕ ಭಯೋತ್ಪಾದನೆಯ ಕೇಂದ್ರ ಬಿಂದು ಎಲ್ಲಿದೆ ಎಂಬುದು ಇಡೀ ವಿಶ್ವಕ್ಕೆ ತಿಳಿದಿದೆ. ಅಲ್ಲದೇ ತನ್ನ ಆಂತರಿಕ ಸಮಸ್ಯೆ ಮತ್ತು ವೈಫಲ್ಯಗಳಿಗೆ ಭಾರತ ಸೇರಿದಂತೆ ಇನ್ನಿತರ ದೇಶಗಳನ್ನು ಬೆಟ್ಟು ಮಾಡಿ ತೋರಿಸುವ ಬದಲು, ತನ್ನನ್ನು ತಾನು ಪರಾಮರ್ಶಿಸಿಕೊಳ್ಳಬೇಕು. ಹೀಗಾಗಿ ನಾವು ಈ ಆರೋಪವನ್ನು ತಿರಸ್ಕರಿಸುತ್ತೇವೆ ಎಂದು ಹೇಳಿದರು.
ಇನ್ನು ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ಶಫ್ಕತ್ ಅಲಿ ಖಾನ್ ಅವರು, ಜಾಫರ್ ಎಕ್ಸ್ಪ್ರೆಸ್ ಮೇಲಿನ ದಾಳಿಯಲ್ಲಿ ಭಾಗಿಯಾಗಿರುವ ಬಂಡುಕೋರರು ಅಫ್ಘಾನಿಸ್ತಾನದ ರಿಂಗ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಆರೋಪಿಸಿದ್ದರು.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…