Mysore
26
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಮಾಡಿದ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ

ಮೈಸೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಲವಾರು ಸೇವೆಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಭಿವೃದ್ಧಿಪಡಿಸಿರುವ ಪಂಚಮಿತ್ರ ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹಾದೇವಪ್ಪ ಅವರು ಇಂದು ಜಲದರ್ಶಿನಿ ಅತಿಥಿ ಗೃಹದಲ್ಲಿ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು “ಪಂಚಮಿತ್ರ” ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!