Uncategorized

ನಾಳೆ ಸಂಸತ್‌ನಲ್ಲಿ ಪ್ರತಿಧ್ವನಿಸಲಿದೆ ನೀಟ್‌ ಅಕ್ರಮ; ಸರ್ಕಾರದ ಮೇಲೆ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ನವದೆಹಲಿ: ನೀಟ್‌ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ಕುರಿತು ನಾಳೆ ಸಂಸತ್‌ನಲ್ಲಿ ಗದ್ದಲ ಹಾಗೂ ಕೋಲಾಹಲ ನಡೆಯಲಿದ್ದು, ಸರ್ಕಾರಕ್ಕೆ ಚಾಟಿ ಬೀಸಲು ವಿಪಕ್ಷಗಳು ಸಜ್ಜಾಗಿ ನಿಂತಿವೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ಹೆಚ್ಚಾಗಿವೆ. ಈ ವಿಷಯ ಈಗ ಸಂಸತ್‌ನಲ್ಲೂ ಗದ್ದಲ, ಕೋಲಾಹಲಕ್ಕೆ ಕಾರಣವಾಗಲಿದೆ. ಆದರೆ ಇದಕ್ಕೆ ಕೇಂದ್ರ ಸರ್ಕಾರ ಸಕಲ ರೀತಿಯಲ್ಲೂ ಸಿದ್ಧತೆ ನಡೆಸಿದ್ದು, ಪ್ರತಿಪಕ್ಷಗಳ ಆರೋಪಕ್ಕ ಉತ್ತರ ಕೊಡಲು ಸಜ್ಜಾಗಿದೆ.

ಪರೀಕ್ಷಾ ಅಕ್ರಮ ಸಂಬಂದ ಸಿಬಿಐ ತನಿಖೆ ಪ್ರಾರಂಭಿಸಿರುವುದರಿಂದ ಹಿಡಿದು ವಿಶೇಷ ಸಮಿತಿಯನ್ನು ರಚಿಸುವವರೆಗೂ ನೀಟ್‌ ಸಮಸ್ಯೆಯ ಬಗ್ಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಪರೀಕ್ಷಾ ಅಕ್ರಮದ ವಿಶೇಷ ಸಮಿತಿಯ ವರದಿ ಶೀಘ್ರವೇ ಬರುವ ನಿರೀಕ್ಷೆಯಿದೆ. ಇದಲ್ಲದೇ ಈ ಅಧಿವೇಶನದಲ್ಲಿ ವಂಚನೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಕಠಿಣ ನಿಯಮಗಳು ಜಾರಿಗೆ ಬರಲಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು. ದೃಢವಾದ ಶಿಕ್ಷಣ ವ್ಯವಸ್ಥೆಗೆ ಅಡಿಪಾಯ ಹಾಕಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಸಂಬಂಧ ನಾಳೆ ಸಂಸತ್‌ನಲ್ಲಿ ಕೋಲಾಹಲವೇ ಸೃಷ್ಟಿಯಾಗಲಿದೆ ಎನ್ನಲಾಗಿದ್ದು, ಪ್ರತಿಪಕ್ಷಗಳ ಆರೋಪಕ್ಕೆ ಕೇಂದ್ರ ಸರ್ಕಾರ ಯಾವ ರೀತಿ ಉತ್ತರ ಕೊಡಲಿದೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

2 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

3 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

4 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

4 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

4 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

9 hours ago