Categories: Uncategorized

ಕೊಲೆ ಯತ್ನ ದೂರು ನೀಡಿದ್ದರೂ ಕ್ರಮವಹಿಸದ ಪೊಲೀಸರು : ಅರುಂಧತಿ ಜಿ.ಹೆಗಡೆ ಆರೋಪ

ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಂಧತಿ ಜಿ. ಹೆಗಡೆ ಆರೋಪಿಸಿದರು.

ಕೆಲ ದಿನಗಳ ಹಿಂದೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳುತ್ತಿದ್ದ ರಾಧಾ, ಅಪ್ಸರಾ ಇತರರನ್ನು ಅಡ್ಡಗಟ್ಟಿದ ಮೌನ ಮತ್ತು ತಂಡದವರು ಅವರ ಮೇಲೆ ಹಲ್ಲೆ ನಡೆಸಿ ಶ್ರೇಯಾಳ ಎಂಬವರ ಸ್ನೇಹಿತ ಶರತ್ ಎಂಬಾತನ ಮೂಲಕ ಕಿಡ್ನ್ಯಾಪ್ ಮಾಡಿಸಿ ಲೈಂಗಿಕವಾಗಿ ಕಿರುಕುಳ ನೀಡಿ ಕುಂತಿಬೆಟ್ಟದ ಬಳಿ ಕರೆದೊಯ್ದು ಪೆಟ್ರೋಲ್ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಮಂಗಳಮುಖಿಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಹಲವೆಡೆ ನಡೆದಿದ್ದು, ಕೆಲ ಪ್ರಕರಣಗಳಲ್ಲಿ ಮೌನ ಮತ್ತಿತರರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಅ. ೧೪ರಂದು ಮಾಹಿತಿ ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪ್ರಬಲ ವ್ಯಕ್ತಿಗಳ ಬೆಂಬಲದೊಂದಿಗೆ ಪ್ರಕರಣವನ್ನು ಮುಚ್ಚಿಹಾಕಲು ಒತ್ತಡ ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ದೂರು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಕೊಲೆಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರೂ ತೊಂದರೆ ಉಂಟಾದಲ್ಲಿ ಪೊಲೀಸರು ಮತ್ತು ಕೃತ್ಯ ಎಸಗಿರುವ ಆರೋಪಿಗಳೇ ಕಾರಣ ಎಂದು ಎಚ್ಚರಿಕೆ ನೀಡಿದರು.

ಮಂಗಳಮುಖಿಯರಾದ ಚೈತ್ರಾ, ಚಂದನಾ, ರಾಧಾ, ಸ್ವಾತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

57 mins ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

59 mins ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

1 hour ago

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ…

1 hour ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

1 hour ago

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…

1 hour ago