ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಂಧತಿ ಜಿ. ಹೆಗಡೆ ಆರೋಪಿಸಿದರು.
ಕೆಲ ದಿನಗಳ ಹಿಂದೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳುತ್ತಿದ್ದ ರಾಧಾ, ಅಪ್ಸರಾ ಇತರರನ್ನು ಅಡ್ಡಗಟ್ಟಿದ ಮೌನ ಮತ್ತು ತಂಡದವರು ಅವರ ಮೇಲೆ ಹಲ್ಲೆ ನಡೆಸಿ ಶ್ರೇಯಾಳ ಎಂಬವರ ಸ್ನೇಹಿತ ಶರತ್ ಎಂಬಾತನ ಮೂಲಕ ಕಿಡ್ನ್ಯಾಪ್ ಮಾಡಿಸಿ ಲೈಂಗಿಕವಾಗಿ ಕಿರುಕುಳ ನೀಡಿ ಕುಂತಿಬೆಟ್ಟದ ಬಳಿ ಕರೆದೊಯ್ದು ಪೆಟ್ರೋಲ್ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮಂಗಳಮುಖಿಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಹಲವೆಡೆ ನಡೆದಿದ್ದು, ಕೆಲ ಪ್ರಕರಣಗಳಲ್ಲಿ ಮೌನ ಮತ್ತಿತರರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಅ. ೧೪ರಂದು ಮಾಹಿತಿ ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪ್ರಬಲ ವ್ಯಕ್ತಿಗಳ ಬೆಂಬಲದೊಂದಿಗೆ ಪ್ರಕರಣವನ್ನು ಮುಚ್ಚಿಹಾಕಲು ಒತ್ತಡ ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ದೂರು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಕೊಲೆಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರೂ ತೊಂದರೆ ಉಂಟಾದಲ್ಲಿ ಪೊಲೀಸರು ಮತ್ತು ಕೃತ್ಯ ಎಸಗಿರುವ ಆರೋಪಿಗಳೇ ಕಾರಣ ಎಂದು ಎಚ್ಚರಿಕೆ ನೀಡಿದರು.
ಮಂಗಳಮುಖಿಯರಾದ ಚೈತ್ರಾ, ಚಂದನಾ, ರಾಧಾ, ಸ್ವಾತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…