ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಂಧತಿ ಜಿ. ಹೆಗಡೆ ಆರೋಪಿಸಿದರು.
ಕೆಲ ದಿನಗಳ ಹಿಂದೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳುತ್ತಿದ್ದ ರಾಧಾ, ಅಪ್ಸರಾ ಇತರರನ್ನು ಅಡ್ಡಗಟ್ಟಿದ ಮೌನ ಮತ್ತು ತಂಡದವರು ಅವರ ಮೇಲೆ ಹಲ್ಲೆ ನಡೆಸಿ ಶ್ರೇಯಾಳ ಎಂಬವರ ಸ್ನೇಹಿತ ಶರತ್ ಎಂಬಾತನ ಮೂಲಕ ಕಿಡ್ನ್ಯಾಪ್ ಮಾಡಿಸಿ ಲೈಂಗಿಕವಾಗಿ ಕಿರುಕುಳ ನೀಡಿ ಕುಂತಿಬೆಟ್ಟದ ಬಳಿ ಕರೆದೊಯ್ದು ಪೆಟ್ರೋಲ್ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಮಂಗಳಮುಖಿಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಹಲವೆಡೆ ನಡೆದಿದ್ದು, ಕೆಲ ಪ್ರಕರಣಗಳಲ್ಲಿ ಮೌನ ಮತ್ತಿತರರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಅ. ೧೪ರಂದು ಮಾಹಿತಿ ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪ್ರಬಲ ವ್ಯಕ್ತಿಗಳ ಬೆಂಬಲದೊಂದಿಗೆ ಪ್ರಕರಣವನ್ನು ಮುಚ್ಚಿಹಾಕಲು ಒತ್ತಡ ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ದೂರು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಕೊಲೆಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರೂ ತೊಂದರೆ ಉಂಟಾದಲ್ಲಿ ಪೊಲೀಸರು ಮತ್ತು ಕೃತ್ಯ ಎಸಗಿರುವ ಆರೋಪಿಗಳೇ ಕಾರಣ ಎಂದು ಎಚ್ಚರಿಕೆ ನೀಡಿದರು.
ಮಂಗಳಮುಖಿಯರಾದ ಚೈತ್ರಾ, ಚಂದನಾ, ರಾಧಾ, ಸ್ವಾತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…