Categories: Uncategorized

ಕೊಲೆ ಯತ್ನ ದೂರು ನೀಡಿದ್ದರೂ ಕ್ರಮವಹಿಸದ ಪೊಲೀಸರು : ಅರುಂಧತಿ ಜಿ.ಹೆಗಡೆ ಆರೋಪ

ಮಂಡ್ಯ : ಪಾಂಡವಪುರದ ಆರತಿ ಉಕ್ಕಡ ದೇವಸ್ಥಾನಕ್ಕೆ ಹೋಗುತ್ತಿದ್ದ ರಾಧಾ, ಅಪ್ಸರಾ ಮತ್ತು ಸ್ನೇಹಿತೆಯರ ಮೇಲೆ ಮೌನ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿರುವ ಬಗ್ಗೆ ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮಂಗಳಮುಖಿಯರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರುಂಧತಿ ಜಿ. ಹೆಗಡೆ ಆರೋಪಿಸಿದರು.

ಕೆಲ ದಿನಗಳ ಹಿಂದೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳುತ್ತಿದ್ದ ರಾಧಾ, ಅಪ್ಸರಾ ಇತರರನ್ನು ಅಡ್ಡಗಟ್ಟಿದ ಮೌನ ಮತ್ತು ತಂಡದವರು ಅವರ ಮೇಲೆ ಹಲ್ಲೆ ನಡೆಸಿ ಶ್ರೇಯಾಳ ಎಂಬವರ ಸ್ನೇಹಿತ ಶರತ್ ಎಂಬಾತನ ಮೂಲಕ ಕಿಡ್ನ್ಯಾಪ್ ಮಾಡಿಸಿ ಲೈಂಗಿಕವಾಗಿ ಕಿರುಕುಳ ನೀಡಿ ಕುಂತಿಬೆಟ್ಟದ ಬಳಿ ಕರೆದೊಯ್ದು ಪೆಟ್ರೋಲ್ ಹಾಕಿ ಹತ್ಯೆ ಮಾಡಲು ಯತ್ನಿಸಿದ್ದಾರೆ. ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಮಂಗಳಮುಖಿಯರ ಮೇಲೆ ದೌರ್ಜನ್ಯ, ದಬ್ಬಾಳಿಕೆಗಳು ಹಲವೆಡೆ ನಡೆದಿದ್ದು, ಕೆಲ ಪ್ರಕರಣಗಳಲ್ಲಿ ಮೌನ ಮತ್ತಿತರರು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಅ. ೧೪ರಂದು ಮಾಹಿತಿ ನೀಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿಗಳು ಪ್ರಬಲ ವ್ಯಕ್ತಿಗಳ ಬೆಂಬಲದೊಂದಿಗೆ ಪ್ರಕರಣವನ್ನು ಮುಚ್ಚಿಹಾಕಲು ಒತ್ತಡ ಹೇರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ದೂರು ವಾಪಸ್ ಪಡೆಯಬೇಕು, ಇಲ್ಲದಿದ್ದರೆ ಕೊಲೆಮಾಡುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಮ್ಮ ಜೀವಕ್ಕೆ ಏನಾದರೂ ತೊಂದರೆ ಉಂಟಾದಲ್ಲಿ ಪೊಲೀಸರು ಮತ್ತು ಕೃತ್ಯ ಎಸಗಿರುವ ಆರೋಪಿಗಳೇ ಕಾರಣ ಎಂದು ಎಚ್ಚರಿಕೆ ನೀಡಿದರು.

ಮಂಗಳಮುಖಿಯರಾದ ಚೈತ್ರಾ, ಚಂದನಾ, ರಾಧಾ, ಸ್ವಾತಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago