ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ.
ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ನಂತರ ಎನ್ಸಿಬಿ ಪೊಲೀಸರು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಇದ್ದ ಶೆಡ್ ಮೇಲೆ ದಾಳಿ ನಡೆಸಿದ್ದರು. ಈ ಸಂಬಂಧ ಓರ್ವನ ಬಂಧನ ಕೂಡ ಆಗಿದೆ.
ಇದೀಗ ಎಚ್ಚೆತ್ತ ನಗರದ ಪೊಲೀಸರು ನಗರದಾದ್ಯಂತ ಇರುವ ಫಿನಾಯಿಲ್, ಡಿಟರ್ಜೆಂಟ್, ಆಸಿಡ್ ಇನ್ನಿತರ ರಾಸಾಯನಿಕ ತಯಾರಿಕಾ ಕೈಗಾರಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಶುಕ್ರವಾರ ಹೆಬ್ಬಾಳದಲ್ಲಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.
ಶ್ವಾನದಳದ ಯೋಧ, ಭೈರಾ, ದತ್ತ, ಲಿಯೋ, ಸಿಂಬಾ ಹಾಗೂ ಗರುಡ ಎಂಬ ಶ್ವಾನಗಳೊಂದಿಗೆ ಹೆಬ್ಬಾಳ್ನ ವಿವಿಧ ಘಟಕಗಳಿಗೆ ತೆರಳಿದ 6 ಮಂದಿ ಪೊಲೀಸರ ತಂಡ ಅಲ್ಲಿ ಶೇಖರಿಸಿಡಲಾಗಿದ್ದ ರಾಸಾಯನಿಕ ವಸ್ತುಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸರ ಪರಿಶೀಲನೆ
ಜಿಲ್ಲಾ ಪೊಲೀಸರು ಕೂಡ ಎಚ್ಚೆತ್ತಿದ್ದು, ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಮಿಕಲ್ ತಯಾರಿಕಾ ಘಟಕಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಇನ್ಸ್ಪೆಕ್ಟರ್ ಶೇಖರ್, ಬಾಂಬ್ ಪತ್ತೆದಳ, ಶ್ವಾನದಳದಿಂದ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆ ನಡೆಸಲಾಗಿದೆ.
ಆರೋಪಿ ರಾಜಸ್ಥಾನಕ್ಕೆ
ಇದೇ ವೇಳೆ ಮಾದಕ ವಸ್ತು ಮಾರಾಟ ಆರೋಪದ ಮೇಲೆ ಬಂಧಿತನಾಗಿದ್ದ ಆಲನಹಳ್ಳಿ ನಿವಾಸಿ ಗಣಪತ್ಲಾಲ್ನನ್ನು ಎನ್ಸಿಬಿ ಪೊಲೀಸರು ಗುರುವಾರ ರಾತ್ರಿ ರಾಜಸ್ಥಾನಕ್ಕೆ ಕರೆದೊಯ್ದಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಟ್ರಾವೆಲ್ ವಾರೆಂಟ್ ಮೂಲಕ ತೆರಳಿದ್ದಾರೆ.
ಮಾದಕ ವಸ್ತು ಮಾರಾಟ ಸಂಬಂಧ ಅಹಮದಾಬಾದ್ನಲ್ಲಿ ಮನೋಹರ್ ಬಿಷ್ಣೋಯಿ ಎಂಬಾತನ ಬಂಧನವಾಗಿತ್ತು. ಬಂಧಿತ ಗಣಪತಿಲಾಲ್ ಆತನ ಸಂಬಂಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ಹೆಬ್ಬಾಳದ ಟುಕು ಟುಕು ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ಮ್ಯಾನುಫ್ಯಾಕ್ಚರಿಂಗ್ ಘಟಕದ ಮೇಲೆ ಎನ್ಸಿಬಿ ಪೊಲೀಸರು ದಾಳಿ ನಡೆಸಿದ್ದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…