Categories: Uncategorized

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ.

ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿತ್ತು. ನಂತರ ಎನ್‌ಸಿಬಿ ಪೊಲೀಸರು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿ ಇದ್ದ ಶೆಡ್ ಮೇಲೆ ದಾಳಿ ನಡೆಸಿದ್ದರು. ಈ ಸಂಬಂಧ ಓರ್ವನ ಬಂಧನ ಕೂಡ ಆಗಿದೆ.

ಇದೀಗ ಎಚ್ಚೆತ್ತ ನಗರದ ಪೊಲೀಸರು ನಗರದಾದ್ಯಂತ ಇರುವ ಫಿನಾಯಿಲ್, ಡಿಟರ್ಜೆಂಟ್, ಆಸಿಡ್ ಇನ್ನಿತರ ರಾಸಾಯನಿಕ ತಯಾರಿಕಾ ಕೈಗಾರಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಶುಕ್ರವಾರ ಹೆಬ್ಬಾಳದಲ್ಲಿ ಶ್ವಾನದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಶ್ವಾನದಳದ ಯೋಧ, ಭೈರಾ, ದತ್ತ, ಲಿಯೋ, ಸಿಂಬಾ ಹಾಗೂ ಗರುಡ ಎಂಬ ಶ್ವಾನಗಳೊಂದಿಗೆ ಹೆಬ್ಬಾಳ್‌ನ ವಿವಿಧ ಘಟಕಗಳಿಗೆ ತೆರಳಿದ 6 ಮಂದಿ ಪೊಲೀಸರ ತಂಡ ಅಲ್ಲಿ ಶೇಖರಿಸಿಡಲಾಗಿದ್ದ ರಾಸಾಯನಿಕ ವಸ್ತುಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸರ ಪರಿಶೀಲನೆ
ಜಿಲ್ಲಾ ಪೊಲೀಸರು ಕೂಡ ಎಚ್ಚೆತ್ತಿದ್ದು, ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಮಿಕಲ್ ತಯಾರಿಕಾ ಘಟಕಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಇನ್‌ಸ್ಪೆಕ್ಟರ್ ಶೇಖರ್, ಬಾಂಬ್ ಪತ್ತೆದಳ, ಶ್ವಾನದಳದಿಂದ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆ ನಡೆಸಲಾಗಿದೆ.

ಆರೋಪಿ ರಾಜಸ್ಥಾನಕ್ಕೆ
ಇದೇ ವೇಳೆ ಮಾದಕ ವಸ್ತು ಮಾರಾಟ ಆರೋಪದ ಮೇಲೆ ಬಂಧಿತನಾಗಿದ್ದ ಆಲನಹಳ್ಳಿ ನಿವಾಸಿ ಗಣಪತ್‌ಲಾಲ್‌ನನ್ನು ಎನ್‌ಸಿಬಿ ಪೊಲೀಸರು ಗುರುವಾರ ರಾತ್ರಿ ರಾಜಸ್ಥಾನಕ್ಕೆ ಕರೆದೊಯ್ದಿದ್ದಾರೆ. ನ್ಯಾಯಾಲಯದ ಅನುಮತಿ ಪಡೆದು ಟ್ರಾವೆಲ್ ವಾರೆಂಟ್ ಮೂಲಕ ತೆರಳಿದ್ದಾರೆ.

ಮಾದಕ ವಸ್ತು ಮಾರಾಟ ಸಂಬಂಧ ಅಹಮದಾಬಾದ್‌ನಲ್ಲಿ ಮನೋಹರ್ ಬಿಷ್ಣೋಯಿ ಎಂಬಾತನ ಬಂಧನವಾಗಿತ್ತು. ಬಂಧಿತ ಗಣಪತಿಲಾಲ್ ಆತನ ಸಂಬಂಧಿಯಾಗಿದ್ದು, ಈ ಹಿನ್ನೆಲೆಯಲ್ಲಿ ಹೆಬ್ಬಾಳದ ಟುಕು ಟುಕು ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ಮ್ಯಾನುಫ್ಯಾಕ್ಚರಿಂಗ್ ಘಟಕದ ಮೇಲೆ ಎನ್‌ಸಿಬಿ ಪೊಲೀಸರು ದಾಳಿ ನಡೆಸಿದ್ದರು.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

37 mins ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

44 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

2 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

2 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

2 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago