Categories: Uncategorized

ಕಾಂಗ್ರೆಸ್‌ ಸರ್ಕಾರ ವೋಟಿಗಾಗಿ ರಾಜ್ಯವನ್ನು ಇಸ್ಲಾಮಿಕರಣ ಮಾಡಲು ಹೊರಟಿದೆ: ಆರ್‌.ಅಶೋಕ್‌

ಮೈಸೂರು: ಕಾಂಗ್ರೆಸ್‌ ಸರ್ಕಾರ ರಂಜಾನ್‌ ವೇಳೆ ರಜೆ ನೀಡುವುದಕ್ಕೆ ಮುಂದಾಗಿದ್ದು, ವೋಟಿಗಾಗಿ ಇಡೀ ರಾಜ್ಯವನ್ನೇ ಇಸ್ಲಾಮಿಕರಣ ಮಾಡಲು ಹೊರಟಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷ ಆರ್‌.ಅಶೋಕ್‌ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.24) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದು ನಡೆಯುವ ಹೋರಾಟಕ್ಕೆ ನಾನು ಭಾಗವಹಿಸಲು ಬಂದಿದ್ದೇನೆ. ನಮ್ಮ ಹಿಂದೂ ಸಂಘಟನೆಗಳಿಗೆ ನಮ್ಮ ಬೆಂಬಲ ಇದೆ. ಇವರನ್ನು ಮಟ್ಟ ಹಾಕಲೇಬೇಕು ಇಲ್ಲ ಅಂದರೆ ದೇಶಕ್ಕೆ ಉಳಿಗಾಲ ಇಲ್ಲ ಎಂದಿದ್ದಾರೆ.

ಇತ್ತೀಚೆಗೆ ಉದಯಗಿರಿ ಪೊಲೀಸ್‌ ಠಾಣೆಯ ಮೇಲೆ ನಡೆದ ಕಲ್ಲು ತೂರಾಟದ ಪ್ರಕರಣ ಇಡೀ ರಾಜ್ಯವೇ ಬೆಚ್ಚಿ ಬೀಳುವ ಘಟನೆಯಾಗಿದೆ. ರಾಜ್ಯದಲ್ಲಿ ಪೋಲಿಸರನ್ನು ಕಂಡರೆ ದೊಡ್ಡ ದೊಡ್ಡ ರಾಜಕಾರಣಿಗಳು ಮತ್ತು ಪ್ರಭಾವವುಳ್ಳ ವ್ಯಕ್ತಗಳೇ ಭಯ ಪಡುತ್ತಾರೆ. ಹೀಗಾಗಿರುವಾಗ ಈ ಕಿಡಿಗೇಡಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ. ಅವರನ್ನು ಪೊಲೀಸರು ನಿಯಂತ್ರಿಸದಿದ್ದರೆ ಪೊಲೀಸ್‌ ಠಾಣೆಗೆ ಬೆಂಕಿ ಹಚ್ಚುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ನಾವು ಮಾಡಿದ್ದೇವೆ. ಅದಕ್ಕೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದು, ಕೆಲವು ಮಂದಿಯನ್ನು ಬಂಧಿಸಿದ್ದಾರೆ. ಆದರರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಉದಯಗಿರಿ ಪೊಲೀಸ್‌ ಠಾಣೆಗೆ ಬಂದು ಹೋದಮೇಲೆ ಆರೋಪಿಗಳನ್ನು ಬಂಧಿಸುವುದೇ ನಿಂತು ಹೋಗಿದೆ ಎಂದು ಆರೋಪ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

1 hour ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

2 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

6 hours ago