Categories: Uncategorized

‘ಬೇಗೂರು ಕಾಲೋನಿ’ಗೆ ಹೊರಟ ರಾಜೀವ್‍ ಹನು …

‘ಉಸಿರೇ ಉಸಿರೇ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು ನಟ ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ರಾಜೀವ್‍ ಹನು. ಆದರೆ, ಚಿತ್ರ ತಡವಾಗಿ ಬಿಡುಗಡೆಯಾಗಿ, ಬಹಳ ಬೇಗನೆ ಮಾಯವಾಯಿತು. ಆ ನಂತರ ರಾಜೀವ್‍ ಮುಮದಿನ ಹೆಜ್ಜೆ ಏನು? ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. ಅದಕ್ಕೆ ಉತ್ತರ ಕೊಟ್ಟಿರುವ ರಾಜೀವ್‍, ಸದ್ದಿಲ್ಲದೆ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ.

ಇತ್ತೀಚೆಗೆ ರಾಜೀವ್‍ ಹನು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಅವರ ಹೊಸ ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ ‘ಬೇಗೂರು ಕಾಲೋನಿ’ ಎಂದು ಹೆಸರಿಡಲಾಗಿದ್ದು, ಚಿತ್ರದ ಮೊದಲ ನಟ ಸಹ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ‘ರಾಜೀವ’ ಎಂಬ ಸಿನಿಮಾ ನಿರ್ದೇಶಿಸಿದ್ದ ‘ಫ್ಲೈಯಿಂಗ್ ಕಿಂಗ್’ ಮಂಜು ನಿರ್ದೇಶನದಲ್ಲಿ ‘ಬೇಗೂರು ಕಾಲೋನಿ’ ಚಿತ್ರವು ಮೂಡಿಬರುತ್ತಿದೆ. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಮಂಜು, ಗಲ್ಲಿ ಶಿವ ಎಂಬ ಪ್ರಮುಖ ಪಾತ್ರದಲ್ಲೂ ಮಂಜು ನಟಿಸುತ್ತಿದ್ದಾರೆ. ಪಲ್ಲವಿ ಪರ್ವ ಮತ್ತು ಕೀರ್ತಿ ಭಂಡಾರಿ ನಾಯಕಿಯರಾಗಿ ಅಭಿನಯಿಸುತ್ತಿದ್ದು, ಪೋಸಾನಿ ಕೃಷ್ಣಮುರಳಿ, ರಾಜೀವ್ ಬೆಳವಾಡಿ, ಬಲ ರಾಜವಾಡಿ, ಸಯ್ಯದ್ ಸಲಾಂ, ಗಣೇಶ್ ನಾಯಕ್ ಮುಂತಾದವರು ನಟಿಸಿದ್ದಾರೆ.

‘ಬೇಗೂರು ಕಾಲೋನಿ’ ಚಿತ್ರದ ಚಿತ್ರೀಕರಣ ಸದ್ದಿಲ್‍ಲದೆ ಮುಗಿದಿದ್ದು, ಬೆಂಗಳೂರಿನ ಬೇಗೂರು, ಸರ್ಜಾಪುರ, ಅತ್ತಿಬೆಲೆ, ಬೊಮ್ಮನಹಳ್ಳಿ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಪ್ರೊಡಕ್ಷನ್ ನಡಿ ಶ್ರೀನಿವಾಸ್ ಬಾಬು ನಿರ್ಮಾಣ ಮಾಡುತ್ತಿದ್ದಾರೆ.

ಈ ಹಿಂದೆ ‘ಒನ್ಸ್ ಅಪಾನ್‍ ಎ ಟೈಮ್‍ ಇನ್‍ ಜಮಾಲಿಗುಡ್ಡ’, ‘ಜೆಸಿ’ ಮುಂತಾದ ಚಿತ್ರಗಳಿಗೆ ಛಾಯಾಗ್ರಹಣ ಮಾಡಿರುವ ಕಾರ್ತಿಕ್‍ ಈ ಚಿತ್ರದ ಛಾಯಾಗ್ರಹಕರು, ಅಭಿನಂದನ್‍ ಕಶ್ಯಪ್‍ ಸಂಗೀತ ಸಂಯೋಜಿಸಿದ್ದಾರೆ.

ಭೂಮಿಕಾ

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

6 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

10 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

43 mins ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

48 mins ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

1 hour ago